ಬಾಲಾಕೋಟ್ ದಾಳಿ ಬಳಿಕ ಏನಾಗಿದೆ ಅಂತಿದ್ದವರಿಗೆ ಕೇಂದ್ರದ ಉತ್ತರ| ವಾಯುದಾಳಿ ಬಳಿಕ ಉಗ್ರರ ಒಳನುಸುಳುವಿಕೆ ಕಡಿಮೆ| ಶೇ.43ರಷ್ಟು ಒಳನುಸುಳುವಿಕೆ ಕಡಿಮೆಯಾಗಿದೆ ಎಂದ ಕೇಂದ್ರ| ಲೋಕಸಭೆಗೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಮಾಹಿತಿ| 

ನವದೆಹಲಿ(ಜು.09): ಪುಲ್ವಾಮಾ ದಾಳಿಗೆ ಪ್ರತಿಯಾಗಿ ಭಾರತೀಯ ವಾಯುಸೇನೆ ನಡೆಸಿದ್ದ ಬಾಲಾಕೋಟ್ ವಾಯುದಾಳಿಯ ಪರಿಣಾಮಗಳ ಕುರಿತು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ. 

Add Asianetnews Kannada as a Preferred SourcegooglePreferred

ಜೈಷ್​ ಎ ಮೊಹಮದ್​ ಉಗ್ರರ ತರಬೇತಿ ಕೇಂದ್ರ ಮತ್ತು ನೆಲೆಗಳ ಮೇಲೆ ನಡೆಸಿದ ವಾಯುದಾಳಿ ಬಳಿಕ, ಭಾರತದೊಳಗೆ ಪಾಕಿಸ್ತಾನ ಉಗ್ರರು ನುಸುಳುವ ಪ್ರಮಾಣ ಕಡಿಮೆಯಾಗಿದೆ ಎಂದು ಕೇಂದ್ರ ಸ್ಪಷ್ಟಪಡಿಸಿದೆ.

ಈ ಕುರಿತು ಸದನಕ್ಕೆ ಮಾಹಿತಿ ನೀಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್,​ ಬಾಲಾಕೋಟ್​ ದಾಳಿ ಬಳಿಕ ಉಗ್ರರ ಒಳನುಸುಳುವಿಕೆ ಪ್ರಮಾಣ ಶೇ. 43ರಷ್ಟು ಕಡಿಮೆ ಆಗಿದೆ ಎಂದು ತಿಳಿಸಿದ್ದಾರೆ.

Scroll to load tweet…


ಕಣಿವೆಯಲ್ಲಿ ಉಗ್ರವಾದದ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿದ್ದು, ಅಂತಾರಾಷ್ಟ್ರೀಯ ಗಡಿ ಮತ್ತು ಗಡಿ ನಿಯಂತ್ರಣ ರೇಖೆ ಬಳಿ ಉಗ್ರರು ನುಸುಳದಂತೆ ತಡೆಯಲು ವಿವಿಧ ಹಂತದಲ್ಲಿ ಸೇನೆ ನಿಯೋಜಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.