ವರ್ಷದ ಅಂತ್ಯಕ್ಕೆ ಮತ್ತೊಂದು ಆಘಾತಕಾರಿ ಸುದ್ದಿ ಬಂದೆರಗಿದೆ. ಖಡಕ್ ಐಪಿಎಸ್ ಅಧಿಕಾರಿಯೊಬ್ಬರು ಎಚ್‌1 ಎನ್‌1ಗೆ ಬಲಿಯಾಗಿದ್ದಾರೆ.

ಬೆಂಗಳೂರು[ಡಿ.28] ಐಪಿಎಸ್​ ಅಧಿಕಾರಿ ಮಧುಕರ್ ಶೆಟ್ಟಿ ಹೈದರಾಬಾದ್​​​​ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಎಚ್​1ಎನ್​1, ಶ್ವಾಸಕೋಶದ ಸೋಂಕಿನಿಂದ ಬಳುತ್ತಿದ್ದ ಮಧುಕರ್ ಶೆಟ್ಟಿ ಹೈದರಾಬಾದ್​​​​ನ ಕಾಂಟಿನೆಂಟಲ್​​ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

Add Asianetnews Kannada as a Preferred SourcegooglePreferred

1 ವಾರದಿಂದ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದರು. 1999ರ ಬ್ಯಾಚ್​​ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಚಾಮರಾಜನಗರ ಜಿಲ್ಲೆ, ಚಿಕ್ಕಮಗಳೂರು ಜಿಲ್ಲೆ ಸೇರಿ ರಾಜ್ಯದ ಹಲವೆಡೆ ಸೇವೆ ಸಲ್ಲಿಸಿದ್ದರು.

ಎಚ್‌1 ಎನ್‌1 ಹಂದಿಜ್ವರದ ಲಕ್ಷಣಗಳು ಏನು?

ಲೋಕಾಯುಕ್ತ ಸಂಸ್ಥೆಯಲ್ಲಿ ಖಡಕ್​ ಅಧಿಕಾರಿಯಾಗಿದ್ದ ಮಧುಕರ್ ಶೆಟ್ಟಿ 2011ರಲ್ಲಿ ಉನ್ನತ ಶಿಕ್ಷಣಕ್ಕಾಗಿ ರಜೆ ಮೇಲೆ ತೆರಳಿದ್ದರು. 2011ರಲ್ಲಿ ಉನ್ನತ ಶಿಕ್ಷಣಕ್ಕಾಗಿ ರಜೆ ಮೇಲೆ ತೆರಳಿದ್ದ ಮಧುಕರ್​ ಶೆಟ್ಟಿ ನಂತರ ರಾಜ್ಯ ಐಜಿಪಿಯಾಗಿ ಬಡ್ತಿ ಪಡೆದಿದ್ದರು.

ಕೆಲ ಕಾಲ ಪೊಲೀಸ್​ ನೇಮಕಾತಿ ವಿಭಾಗದ ನಿರ್ದೇಶಕರಾಗಿ ಸೇವೆ ಸಲ್ಲಿಸಿ 2017ರಿಂದ ಹೈದರಾಬಾದ್​​ ಪೊಲೀಸ್ ಅಕಾಡೆಮಿಯಲ್ಲಿ ಡೆಪ್ಯುಟಿ ಡೈರೆಕ್ಟರ್ ಆಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು. 18 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಮಧುಕರ್ ಶೆಟ್ಟಿ ಅವರ ನಿಧನಕ್ಕೆ ಶಾಸಕ ಸುರೇಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ. 

Scroll to load tweet…
Scroll to load tweet…
Scroll to load tweet…
Scroll to load tweet…