Asianet Suvarna News Asianet Suvarna News

ಹೊಸ ರಾಜ್ಯಾಧ್ಯಕ್ಷ ಫೈನಲ್..!

ಬಹುಜನ ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಪ್ರೊ.ಹರಿರಾಮ್ ನೇಮಕ ಮಾಡಿ ಆದೇಶ ನೀಡಲಾಗಿದೆ. ಬಿಎಸ್ ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರು ಹರಿರಾಮ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.  

Hariram BSP New Karnataka State President

ಬೆಂಗಳೂರು : ಬಹುಜನ ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಪ್ರೊ.ಹರಿರಾಮ್ ನೇಮಕ ಮಾಡಿ ಆದೇಶ ನೀಡಲಾಗಿದೆ. ಬಿಎಸ್ ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರು ಹರಿರಾಮ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.  

ರಾಜ್ಯಾಧ್ಯಕ್ಷರಾಗಿದ್ದ ಎನ್.ಮಹೇಶ್ ಅವರು ಸದ್ಯ ಕರ್ನಾಟಕ ಸರ್ಕಾರದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸ್ಥಾನವನ್ನು ಅಲಂಕರಿಸಿದ್ದು, ಈ ನಿಟ್ಟಿನಲ್ಲಿ ಪ್ರೊ.ಹರಿರಾಮ್ ನೇಮಕ ಮಾಡಲಾಗಿದೆ. 

ಸಮಾಜವಾದಿ ಪಕ್ಷದ  ರಾಜ್ಯಾಧ್ಯಕ್ಷರಾಗಿ ಪ್ರೊ.ಹರಿರಾಮ್ ನೇಮಕದ ಬಗ್ಗೆ ಗುರುವಾರ ಅಧಿಕೃತವಾಗಿ ಪ್ರಕಟಣೆ ಹೊರಡಿಸಲಾಗುತ್ತದೆ.

Follow Us:
Download App:
  • android
  • ios