ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ಸ್ಪರ್ಧೆ ಡೌಟ್..!
ರಾಜಕೀಯದಲ್ಲಿ ಓಡಾಡಲು ಆರೋಗ್ಯ ಸರಿಯಾಗಿ ಸ್ಪಂದಿಸದ ಕಾರಣ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಕಷ್ಟ ಎಂದು ದೇವೇಗೌಡರು ತಿಳಿಸಿದ್ದಾರೆ.
ಬೆಂಗಳೂರು : ರಾಜಕೀಯದಲ್ಲಿ ಓಡಾಡಲು ಆರೋಗ್ಯ ಸರಿಯಾಗಿ ಸ್ಪಂದಿಸದ ಕಾರಣ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಕಷ್ಟ ಎಂದು ದೇವೇಗೌಡರು ತಿಳಿಸಿದ್ದಾರೆ.
2019ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆಸಿಲ್ಲ.
ಆರೋಗ್ಯ ಸಮಸ್ಯೆಯಿಂದಾಗಿ ಸ್ಪರ್ಧಿಸುವುದು ಕಷ್ಟ. ಆದರೆ ದೇವರ ಇಚ್ಛೆ. ಸ್ಪರ್ಧೆಯ ಬಗ್ಗೆ ದೇವರೇ ನಿರ್ಧರಿಸಬೇಕು. ಏನಾಗುತ್ತದೆಯೋ ಹೇಳಲು ಸಾಧ್ಯವಿಲ್ಲ ಎಂದರು.