Asianet Suvarna News Asianet Suvarna News

ದೀಪಕ್ ಕುಟುಂಬವನ್ನು ಭೇಟಿಯಾದ ದೇವೇಗೌಡರು

ಇತ್ತೀಚೆಗೆ ಮಂಗಳೂರಿನಲ್ಲಿ ಕೊಲೆಯಾದ ದೀಪಕ್ ರಾವ್ ಕುಟುಂಬಸ್ಥರನ್ನು ಜೆಡಿಎಸ್ ವರಿಷ್ಠ ದೇವೇಗೌಡರು ಭೇಟಿಯಾಗಿದ್ದಾರೆ.

HD Devegowda Visits Deepak Family

ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಕೊಲೆಯಾದ ದೀಪಕ್ ರಾವ್ ಕುಟುಂಬಸ್ಥರನ್ನು ಜೆಡಿಎಸ್ ವರಿಷ್ಠ ದೇವೇಗೌಡರು ಭೇಟಿಯಾಗಿದ್ದಾರೆ.

ಕಾಟಿಪ‌ಳ್ಳದ ದೀಪಕ್ ರಾವ್ ಮನೆಗೆ ತೆರಳಿದ ಮಾಜಿ ಪ್ರಧಾನಿ ದೇವೇಗೌಡರು, ದುಷ್ಕರ್ಮಿಗಳಿಂದ ಕೊಲೆಯಾದ ದೀಪಕ್ ತಾಯಿ ಪ್ರೇಮಾ ಅವರಿಗೆ ಸಾಂತ್ವನ ಹೇಳಿದ್ದಾರೆ.

ಈ ಸಂದರ್ಭದಲ್ಲಿ ದೀಪಕ್ ಮನೆ ಪರಿಸ್ಥಿತಿಯನ್ನು ಜೆಡಿಎಸ್ ಮುಖಂಡ ಬಿ.ಎಂ. ಫಾರೂಕ್  ದೇವೇಗೌಡರಿಗೆ ವಿವರಿಸಿದರು.

ಕಳೆದ ಜ.3ರಂದು ಮಂಗಳೂರಿನ ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ದೀಪಕ್ ರಾವ್ ಬರ್ಬರವಾಗಿ ಹತ್ಯೆಯಾಗಿದ್ದು, ಮಂಗಳೂರಿನಲ್ಲಿ ಉದ್ವಿಗ್ನತೆಗೆ ಕಾರಣವಾಗಿತ್ತು.

Follow Us:
Download App:
  • android
  • ios