ದೀಪಕ್ ಕುಟುಂಬವನ್ನು ಭೇಟಿಯಾದ ದೇವೇಗೌಡರು
ಇತ್ತೀಚೆಗೆ ಮಂಗಳೂರಿನಲ್ಲಿ ಕೊಲೆಯಾದ ದೀಪಕ್ ರಾವ್ ಕುಟುಂಬಸ್ಥರನ್ನು ಜೆಡಿಎಸ್ ವರಿಷ್ಠ ದೇವೇಗೌಡರು ಭೇಟಿಯಾಗಿದ್ದಾರೆ.
ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಕೊಲೆಯಾದ ದೀಪಕ್ ರಾವ್ ಕುಟುಂಬಸ್ಥರನ್ನು ಜೆಡಿಎಸ್ ವರಿಷ್ಠ ದೇವೇಗೌಡರು ಭೇಟಿಯಾಗಿದ್ದಾರೆ.
ಕಾಟಿಪಳ್ಳದ ದೀಪಕ್ ರಾವ್ ಮನೆಗೆ ತೆರಳಿದ ಮಾಜಿ ಪ್ರಧಾನಿ ದೇವೇಗೌಡರು, ದುಷ್ಕರ್ಮಿಗಳಿಂದ ಕೊಲೆಯಾದ ದೀಪಕ್ ತಾಯಿ ಪ್ರೇಮಾ ಅವರಿಗೆ ಸಾಂತ್ವನ ಹೇಳಿದ್ದಾರೆ.
ಈ ಸಂದರ್ಭದಲ್ಲಿ ದೀಪಕ್ ಮನೆ ಪರಿಸ್ಥಿತಿಯನ್ನು ಜೆಡಿಎಸ್ ಮುಖಂಡ ಬಿ.ಎಂ. ಫಾರೂಕ್ ದೇವೇಗೌಡರಿಗೆ ವಿವರಿಸಿದರು.
ಕಳೆದ ಜ.3ರಂದು ಮಂಗಳೂರಿನ ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ದೀಪಕ್ ರಾವ್ ಬರ್ಬರವಾಗಿ ಹತ್ಯೆಯಾಗಿದ್ದು, ಮಂಗಳೂರಿನಲ್ಲಿ ಉದ್ವಿಗ್ನತೆಗೆ ಕಾರಣವಾಗಿತ್ತು.