ದೋಸ್ತಿ ಸರಕಾರದ ಗೊಂದಲಗಳು ಒಂದು ಕಡೆ ಇದ್ದಾಗಲೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ರಾಜಕಾರಣ ಸಹ ಇಡೀ ರಾಜ್ಯದ ಗಮನ ಸೆಳೆದಿದೆ.

ಮಂಡ್ಯ[ಫೆ.05] ರೆಬಲ್ ಸ್ಟಾರ್ ಪತ್ನಿ ಸುಮಲತಾ ಅಂಬರೀಶ್ ಬಗ್ಗೆ ಜೆಡಿಎಸ್ ವಿಧಾನಪರಿಷತ್ ಸದಸ್ಯ ಶ್ರೀಕಂಠೇಗೌಡ ನೀಡಿದ ಒಂದು ಹೇಳಿಕೆ ಮಾಧ್ಯಮಗಳಲ್ಲಿ ಮೊದಲು ಚರ್ಚೆಗೆ ವೇದಿಕೆಯಾಗಿತ್ತು. ಇದಾದ ಮೇಲೆಸೋಶಿಯಲ್ ಮೀಡಿಯಾ ಸುದ್ದಿಯನ್ನು ತನ್ನ ಬಳಕೆಗೆ ತೆಗೆದುಕೊಂಡಿತು.

Add Asianetnews Kannada as a Preferred SourcegooglePreferred

ಸುಮಲತಾ ಗೌಡ್ತಿ ಅಲ್ಲ ಎಂದ ಶ್ರೀಕಂಠೇಗೌಡರ ವಿರುದ್ಧ ಅಂಬರೀಶ್ ಅಭಿಮಾನಿಗಳು ನಿನ್ನೆ ಪ್ರತಿಭಟನೆ ನಡೆಸಿದ್ದರು. ಇದೀಗ ಒಂದು ಹೆಜ್ಜೆ ಮುಂದೆ ಹೋಗಿರುವ ಸೋಶಿಯಲ್ ಮೀಡಿಯಾ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ವಿಚಾರ ಎತ್ತಿಕೊಂಡಿದ್ದಾರೆ.

ಸುಮಲತಾ ಮಂಡ್ಯ ಗೌಡ್ತಿ ಅಲ್ಲ ಎಂದಿದ್ದೇ ಇದೆಲ್ಲದಕ್ಕೆ ಕಾರಣವಾಯ್ತು

ತೆಲುಗು ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ ಕುಮಾರಸ್ವಾಮಿ ನನ್ನ ಹೆಂಡತಿ ಸಹ ತೆಲಗು ಕುಟುಂಬದಿಂದ ಬಂದವರು ಎಂದು ಹೇಳಿದ್ದರು. ನಿಖಿಲ್ ಕುಮಾರಸ್ವಾಮಿ ಸಹ ಆ ಸಂದರ್ಶನದಲ್ಲಿ ಇದ್ದಾರೆ.

ಎಚ್ ಡಿ ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ತೆಲುಗು ವಾಹಿನಿಯೊಂದಕ್ಕೆ ನೀಡಿದ ಸಂದರ್ಶನವೊಂದನ್ನು ಹೊರಗೆಳೆದು, ನೋಡಿ ಸ್ವಾಮಿ, ನಿಮ್ಮ ಪತ್ನಿಯವರು ಎಲ್ಲಿಯವರು? ಎಂದು ಕಾಲೆಳೆದಿದ್ದು ಅಲ್ಲದೇ ಟ್ರೋಲ್ ಮಾಡಿದ್ದಾರೆ.