ಸರ್ಕಾರದ ಮುಂದಿನ ನಡೆ ಬಗ್ಗೆ ಸಚಿವ ಡಿಕೆ ಶಿವಕುಮಾರ್ ತಮ್ಮ ಸ್ಪಷ್ಟ ನಿಲುವು ತಿಳಿಸಿದ್ದಾರೆ. ಸಿಎಂ ರಾಜೀನಾಮೆ ವಿಚಾರವಾಗಿಯೂ ಪ್ರತಿಕ್ರಿಯಿಸಿ, ಸರ್ಕಾರ ಮುಂದುವರಿಯಲಿದೆಯಾ, ಪತನವಾಗಲಿದೆಯಾ ಎನ್ನುವು ಪ್ರಶ್ನೆಗೆ ಉತ್ತರ ನೀಡಿದ್ದಾರೆ. 

ಬೆಂಗಳೂರು [ಜು.11] : ರಾಜ್ಯ ರಾಜಕೀಯದಲ್ಲಿ ಹೈ ಡ್ರಾಮಾ ನಡೆಯುತ್ತಿದ್ದು, ಶಾಸಕರು ಸಚಿವರ ರಾಜೀನಾಮೆ ಬಳಿಕ ಇದೀಗ ಸಿಎಂ ರಾಜೀನಾಮೆ ವಿಚಾರ ಚರ್ಚೆಯಾಗುತ್ತಿದೆ. ದಿನದಿನಕ್ಕೂ ಕೂಡ ಹೊಸ ತಿರುವುಗಳೋಂದಿಗೆ ರಾಜಕಾರಣ ಸಾಗುತ್ತಿದೆ. 

Add Asianetnews Kannada as a Preferred SourcegooglePreferred

ಆದರೆ ಸಿಎಂ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸಿಎಂ ರಾಜೀನಾಮೆ ನೀಡುವಂತಹ ಸ್ಥಿತಿ ಸದ್ಯಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಕರ್ನಾಟಕ ರಾಜಕೀಯ ಪ್ರಹಸನದ ಸುದ್ದಿಗಳಿಗೆ ಇಲ್ಲಿ ಕ್ಲಿಕ್ಕಿಸಿ

2008 -09ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಏನಾಗಿತ್ತು. ಆಗಲೂ ಕೂಡ 18 ಮಂದಿ ಬಂಡಾಯ ಎದ್ದಿದ್ದರು. ಆಗ ಯಡಿಯೂರಪ್ಪ ಏನು ಮಾಡಿದರು ಎಂದು ಪ್ರಶ್ನೆ ಮಾಡಿದ್ದಾರೆ. 

ಅಂದು 16 ಮಂದಿಯನ್ನು ಅನರ್ಹಗೊಳಿಸಿ ಬಿಜೆಪಿ ಸರ್ಕಾರ ಮುಂದುವರಿಸಿತ್ತು. ಹಾಗೆ ಅದೇ ಕಾನೂನು, ಅದೇ ಸ್ಪೀಕರ್ ನಿರ್ಣಯ ಈಗಲೂ ಅನ್ವಯಿಸುದಿಲ್ಲವೇ ಎಂದ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ರಾಜೀನಾಮೆ ವಿಚಾರವನ್ನು ತಳ್ಳಿ ಹಾಕಿದರು.