ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಷ್ಟ್ರ ರಾಜಕಾರಣಕ್ಕೆ ಪ್ರವೇಶ ಮಾಡುವ ಸಾಧ್ಯತೆಗಳಿದೆ ಎಂದು ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡ ಅವರು ಸೂಚನೆ ನೀಡಿದ್ದಾರೆ. 

ಹಾಸನ : ಮುಂದೆ ತಾವು ಪ್ರಧಾನಿ ಅಭ್ಯರ್ಥಿ ಆಗುವುದಿಲ್ಲ. ಲೋಕಸಭಾ ಚುನಾವಣೆಗೂ ಕೂಡ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ. 

Add Asianetnews Kannada as a Preferred SourcegooglePreferred

ಇನ್ನು ಇದೇ ವೇಳೆ ವಿಪಕ್ಷಗಳ ಬಿಜೆಪಿಯವರಿಗೆ ಕುಮಾರಸ್ವಾಮಿಯೇ ಟಾರ್ಗೆಟ್ ಆಗಿದ್ದಾರೆ. ಅವರನ್ನು ಅಧಿಕಾರದಿಂದ ಇಳಿಸುವ ಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. 

ಆದರೆ ಮುಂದಿನ ದಿನಗಳಲ್ಲಿ ಹೆಚ್.ಡಿ.ಕುಮಾರಸ್ವಾಮಿ ರಾಷ್ಟ್ರ ರಾಜಕಾರಣಕ್ಕೆ ಹೋಗುವ ಸಾಧ್ಯತೆ ಇದ್ದು, ಅವರು ರಾಷ್ಟ್ರ ರಾಜಕಾರಣಕ್ಕೆ ಕಾಲಿಡಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಬಿಜೆಪಿಗೆ ಜೆಡಿಎಸ್ ಟಾರ್ಗೆಟ್ ಆಗಿದ್ದು, ನಮ್ಮ ಪಕ್ಷವನ್ನು ತೆಗಳುವುದೇ ಅವರಿಗೆ ಕೆಲಸವಾಗಿದೆ ಎಂದು ಹೇಳಿದ್ದಾರೆ.