ಪ್ರತೀ ಸೋಮವಾರ ಅಥವಾ ಗುರುವಾರ ಕುಮಾರಸ್ವಾಮಿಯವರು ಎಸ್'ಐಟಿ ಕಛೇರಿಗೆ ತೆರಳಿ ಸಹಿ ಮಾಡಿ ಬರಬೇಕು. ಅಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕು. ಅಲ್ಲದೇ, ಯಾವುದೇ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆಯೂ ಕುಮಾರಸ್ವಾಮಿಯವರಿಗೆ ಕೋರ್ಟ್​​ ಸೂಚನೆ ನೀಡಿದೆ.

ಬೆಂಗಳೂರು(ಆ. 10): ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಿಎಂ ಹೆಚ್'ಡಿ ಕುಮಾರಸ್ವಾಮಿಯವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಹೈಕೋರ್ಟ್'ನ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸ್ಯ ಪೀಠದಿಂದ ಆದೇಶ ಹೊರಡಿಸಲಾಗಿದೆ. ಈ ಮಧ್ಯೆ ಕೆಲವು ಷರತ್ತುಗಳನ್ನು ಕೂಡ ಕೋರ್ಟ್ ವಿಧಿಸಿದೆ. ಸುಪ್ರೀಂ ಕೋರ್ಟ್'ಗೆ ಅಂತಿಮ ವರದಿ ಸಲ್ಲಿಸುವವರೆಗೂ ಜಾಮೀನಿನ ಅವಧಿ ಇರುತ್ತದೆ. ಅಲ್ಲದೆ ಪ್ರತೀ ಸೋಮವಾರ ಅಥವಾ ಗುರುವಾರ ಕುಮಾರಸ್ವಾಮಿಯವರು ಎಸ್'ಐಟಿ ಕಛೇರಿಗೆ ತೆರಳಿ ಸಹಿ ಮಾಡಿ ಬರಬೇಕು. ಅಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕು. ಅಲ್ಲದೇ, ಯಾವುದೇ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆಯೂ ಕುಮಾರಸ್ವಾಮಿಯವರಿಗೆ ಕೋರ್ಟ್​​ ಸೂಚನೆ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಾಮೀನಿಗೆ ವಿಧಿಸಿದ ಷರತ್ತುಗಳು:
* ಪ್ರತೀ ಸೋಮವಾರ ಅಥವಾ ಗುರುವಾರ ಎಸ್ಐಟಿ ಕಛೇರಿಗೆ ತೆರಳಿ ಸಹಿ ಹಾಕಬೇಕು
* ಎಸ್'ಐಟಿ ಅಧಿಕಾರಿಗಳು ವಿಚಾರಣೆಗೆ ಕರೆದಾಗಲೆಲ್ಲಾ ಹಾಜರಾಗಬೇಕು
* ಯಾವುದೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಯತ್ನಿಸಬಾರದು