ಕೇವಲ ಕಾಲು ತಾಕಿದ್ದಕ್ಕೆ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ನಲಫಾಡ್ ಹಲ್ಲೆ ಮಾಡಲಿಲ್ಲ.

ಹುಬ್ಬಳ್ಳಿ(ಫೆ.20): ಮೊಹಮದ್ ನಲಪಾಡ್ ಹಾಗೂ ವಿದ್ವತ್ ಪ್ರಕರಣಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ.

Add Asianetnews Kannada as a Preferred SourcegooglePreferred

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕೇವಲ ಕಾಲು ತಾಕಿದ್ದಕ್ಕೆ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ನಲಫಾಡ್ ಹಲ್ಲೆ ಮಾಡಲಿಲ್ಲ. ಇದರ ಹಿಂದೆ ಕೋಟ್ಯಾಂತರ ರೂಪಾಯಿಗಳ ಹಗರಣ ಇದೆ. ಕಂಪ್ಯೂಟರ್ ಹ್ಯಾಕಿಂಗ್ , ಬಿಟ್ ಕಾಯಿನ್ , ಹವಾಲಾ ದಂಧೆಯ ಕರಾಳ ಮುಖ ಇದೆ. ಕೂಡಲೇ ಪ್ರಕರಣವನ್ನು ಸೈಬರ್ ಕ್ರೈಮ್ ವಿಭಾಗದಿಂದ ತನಿಖೆ ನಡೆಸಬೇಕು. ಇದರ ಹಿಂದೆ ಇರುವ ಕರಾಳ ಸತ್ಯ ಬಹಿರಂಗವಾಗಲಿ ಈ ಪ್ರಕರಣವನ್ನು ಮುಚ್ಚಿಹಾಕುವ ಯತ್ನದಲ್ಲಿ ಇದ್ದಾರೆ. ಕಾಂಗ್ರಸ್ ನಾಯಕರ ಪುಂಡಾಟಿಕೆ ಅವರ ಮನಸ್ಥಿತಿಯನ್ನು ಬಿಂಬಿಸುತ್ತಿದೆ' ಎಂದು ತಿಳಿಸಿದರು.