ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕನೊಬ್ಬನನ್ನು ಹಾಡಹಗಲೇ ದುಷ್ಕರ್ಮಿಗಳು ರಸ್ತೆಯಲ್ಲೇ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಭಾರತೀನಗರದ ಅರೆಚಾಕನಹಳ್ಳಿ- ಗುಡಿಗೆರೆ ಬಳಿ ಇಂದು ಬೆಳಗ್ಗೆ ನಡೆದಿದೆ.

ಮಂಡ್ಯ (ಮಾ.31): ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕನೊಬ್ಬನನ್ನು ಹಾಡಹಗಲೇ ದುಷ್ಕರ್ಮಿಗಳು ರಸ್ತೆಯಲ್ಲೇ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಭಾರತೀನಗರದ ಅರೆಚಾಕನಹಳ್ಳಿ- ಗುಡಿಗೆರೆ ಬಳಿ ಇಂದು ಬೆಳಗ್ಗೆ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಡ್ಯದ ಸ್ವರ್ಣಸಂದ್ರ ಬಡಾವಣೆಯ ನಿವಾಸಿ, ಬಿದರಹೊಸಹಳ್ಳಿ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಶಶಿಭೂಷಣ್ (೩೫) ಕೊಲೆಯಾದವರು. ಮಂಡ್ಯದ ಸ್ವರ್ಣಸಂದ್ರ ಬಡಾವಣೆಯಿಂದ ಪಲ್ಸರ್ ಬೈಕ್‌ನಲ್ಲಿ ಶುಕ್ರವಾರ ಬೆಳಗ್ಗೆ 9.30 ರ ಸಮಯದಲ್ಲಿ ಶಾಲೆಗೆಂದು ಕರಡಕೆರೆ, ಅರೆಚಾಕನಹಳ್ಳಿ ಮಾರ್ಗವಾಗಿ ತೆರಳುತ್ತಿದ್ದರು. ಈ ವೇಳೆ ಅಪರಿಚಿತರು ಬೈಕ್ ಅಡ್ಡಗಟ್ಟಿ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸಾರ್ವಜನಿಕರು ತಕ್ಷಣ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದಾರೆ. ಶಾಲಾ ಶಿಕ್ಷಕ ಕಾಳಪ್ಪ ದೂರು ನೀಡಿದ್ದಾರೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ.