Asianet Suvarna News Asianet Suvarna News

ರೆಡ್ಡಿಗಿಲ್ಲ ರಿಲೀಫ್! ಮುಂದುವರಿದ ಬಂಧನದ ಭೀತಿ

‘ಡೀಲ್’ ಮಾಡಿ ಬಂಧನದ ಭೀತಿ ಎದುರಿಸುತ್ತಿರುವ ಪ್ರಭಾವಿ ರಾಜಕಾರಣಿ ಜನಾರ್ದನ ರೆಡ್ಡಿ | ತಲೆಮರೆಸಿಕೊಂಡಿರುವ ರೆಡ್ಡಿಯಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ  

Hearing of Janardhan Reddy Anticipatory Bail Plea Adjourned
Author
Bengaluru, First Published Nov 9, 2018, 4:59 PM IST

ಬೆಂಗಳೂರು: ಪ್ರಕರಣವೊಂದನ್ನು ಮುಚ್ಚಿಹಾಕಲು ತನಿಖಾಸಂಸ್ಥೆ ಜೊತೆ ಡೀಲ್ ಮಾಡಲು ಹೋಗಿ ಬಂಧನದ ಭೀತಿ ಎದುರಿಸುತ್ತಿರುವ ಪ್ರಭಾವಿ ರಾಜಕಾರಣಿ ಜನಾರ್ದನ ರೆಡ್ಡಿಯ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ.

ರೆಡ್ಡಿ ಪರ ವಕೀಲ ಸಿ.ಎಚ್.ಹನುಮಂತರಾಯ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಅರ್ಜಿಯನ್ನು ಸೋಮವಾರಕ್ಕೆ ಮುಂದೂಡಿದ್ದಾರೆ.

ಇದನ್ನೂ ಓದಿ: ಜನಾರ್ದನ ರೆಡ್ಡಿ ತಲೆಮರೆಸಿಕೊಂಡಿದ್ದೇಕೆ? ವಕೀಲ ಬಿಚ್ಚಿಟ್ರು ಕಾರಣ

ಅರ್ಜಿ ಮುಂದೂಡಲ್ಪಟ ಹಿನ್ನೆಲೆಯಲ್ಲಿ ಜನಾರ್ಧನ ರೆಡ್ಡಿಗೆ ಬಂಧನದ ಭೀತಿ ಮುಂದುವರೆದಿದೆ. 

ಆ್ಯಂಬಿಡೆಂಟ್ ಕಂಪನಿಯ ಡೀಲ್ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ, ಇದೀಗ ತಲೆಮರೆಸಿಕೊಂಡಿದ್ದು ಸಿಸಿಬಿ ಪೊಲೀಸರು ಪತ್ತೆಗಾಗಿ ಬಲೆ ಬೀಸಿದ್ದಾರೆ.  ವಿಚಾರಣೆಗಾಗಿ ಹಾಜರಾಗುವಂತೆ ಸಿಸಿಬಿ ನೊಟೀಸ್ ಕೂಡಾ ಜಾರಿಮಾಡಿದೆ. 

Follow Us:
Download App:
  • android
  • ios