ಕೆ.ಆರ್.ಸರ್ಕಲ್, ಕಾರ್ಪೋರೇಷನ್, ಕೆ.ಆರ್. ಮಾರ್ಕೆಟ್, ವಿಧಾನಸೌಧ, ಶಿವಾಜಿನಗರ, ಜೆ.ಸಿ. ನಗರ, ಮೇಖ್ರಿ ಸರ್ಕಲ್,ಎಚ್ಎಸ್ಆರ್ ಲೇಔಟ್, ಮಡಿವಾಳ, ಮಂಗಮ್ಮನ ಪಾಳ್ಯ, ಬೇಗೂರು, ಬೊಮ್ಮನಹಳ್ಳಿ ಸುತ್ತಮುತ್ತ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ.
ಸಿಲಿಕಾನ್ ಸಿಟಿಯಲ್ಲಿ ಮತ್ತೆ ಮಳೆ ಆರ್ಭಟ ಮುಂದುವರಿದಿದೆ. ಇಂದು ಮುಂಜಾನೆಯಿಂದಲೇ ಮಳೆ ಶುರುವಾಗಿದ್ದು, ಬೆಂಗಳೂರಿಗರು ಆತಂಕಕ್ಕೆ ಒಳಗಾಗಿದ್ದಾರೆ.
ಕೆ.ಆರ್.ಸರ್ಕಲ್, ಕಾರ್ಪೋರೇಷನ್, ಕೆ.ಆರ್. ಮಾರ್ಕೆಟ್, ವಿಧಾನಸೌಧ, ಶಿವಾಜಿನಗರ, ಜೆ.ಸಿ. ನಗರ, ಮೇಖ್ರಿ ಸರ್ಕಲ್,ಎಚ್ಎಸ್ಆರ್ ಲೇಔಟ್, ಮಡಿವಾಳ, ಮಂಗಮ್ಮನ ಪಾಳ್ಯ, ಬೇಗೂರು, ಬೊಮ್ಮನಹಳ್ಳಿ ಸುತ್ತಮುತ್ತ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ.
ಜತೆಗೆ ಆನೇಕಲ್ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಮಳೆಯಿಂದಾಗಿ ನಗರದ ವಾಹನ ಸವಾರರು ಹೈರಾಣಾಗಿದ್ದಾರೆ. ಆನೇಕಲ್ಗೆ ಮೇಯರ್ ಭೇಟಿ ನೀಡಿ ಪರಿಶೀಲಿಸಿದರು. ಜತೆಗೆ ಬೆಂಗಳೂರಿನ ಅನೇಕ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮಳೆ ಹೀಗೆ ಮುಂದುವರಿದರೆ ಇನ್ನೂ ಅನೇಕ ಮನೆಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ.
