Asianet Suvarna News Asianet Suvarna News

ಉತ್ತರ ಭಾರತದಲ್ಲಿ ಭೀಕರ ಮಳೆ: ಯುಪಿ, ಬಿಹಾರದಲ್ಲಿ ಪ್ರವಾಹ!

ಭೀಕರ ಮಳೆಗೆ ತತ್ತರಿಸಿದ ಉತ್ತರ ಭಾರತ| ಮಹಮಳೆಗೆ ಉತ್ತರಪ್ರದೇಶ, ಬಿಹಾರದಲ್ಲಿ 73 ಜನರ ಬಲಿ| ಬಿಹಾರದ ಪ್ರಯಾಗರಾಜ್​, ಉತ್ತರ ಪ್ರದೇಶದ ವಾರಣಾಸಿಯಲ್ಲಿ ಭಾರೀ ಪ್ರಮಾಣ| ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರ| ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಘೋಷಣೆ| ಎನ್​ಡಿಆರ್​ಎಫ್​ ಹಾಗೂ ಎಸ್​ಡಿಆರ್​ಎಫ್​ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ| ರಾಜಸ್ತಾನ ಹಾಗೂ ಮಧ್ಯಪ್ರದೇಶ ಕೂಡ ಭಾರೀ ಮಳೆ|

Heavy Rain In North India Flood Like Situation In UP and Bihar
Author
Bengaluru, First Published Sep 29, 2019, 6:07 PM IST

ಲಕ್ನೋ(ಸೆ.29): ಮಹಾಮಳೆಗೆ ಉತ್ತರ ಪ್ರದೇಶ, ಬಿಹಾರ ರಾಜ್ಯಗಳು ತತ್ತರಿಸಿದ್ದು, ಉಭಯ ರಾಜ್ಯಗಳಲ್ಲಿ ಭೀಕರ ಮಳೆಗೆ ಒಟ್ಟು 73 ಜನರು ಮೃತಪಟ್ಟಿದ್ದಾರೆ. 

ಬಿಹಾರದ ಪ್ರಯಾಗರಾಜ್​, ಉತ್ತರ ಪ್ರದೇಶದ ವಾರಣಾಸಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ. 

ಮಳೆಯಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರ ನೀಡುವುದಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಘೋಷಿಸಿದ್ದಾರೆ. 

ಇನ್ನು ವರುಣನ ಆರ್ಭಟಕ್ಕೆ ಬಿಹಾರ ಕೂಡ ತತ್ತರಿಸಿದ್ದು, ರೈಲು ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಎನ್​ಡಿಆರ್​ಎಫ್​ ಹಾಗೂ ಎಸ್​ಡಿಆರ್​ಎಫ್​ ತಂಡಗಳಿಂದ ರಕ್ಷಣಾ ಕಾರ್ಯ ನಡೆಯುತ್ತಿದ್ದು, ನಿರಂತರ ಕಾರ್ಯಾಚರಣೆಗೆ ಸಿಎಂ ನಿತೀಶ್ ಕುಮಾರ್ ಆದೇಶಿಸಿದ್ದಾರೆ.

ಇದೇ ವೇಳೆ ರಾಜಸ್ತಾನ ಹಾಗೂ ಮಧ್ಯಪ್ರದೇಶ ಕೂಡ ಭಾರೀ ಮಳೆಗೆ ತತ್ತರಿಸಿದ್ದು, ಮುಂಜಾಗೃತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Follow Us:
Download App:
  • android
  • ios