ಈ ಸಂದರ್ಭದಲ್ಲಿ ವಾಹಿನಿಯು ದಾವಣಗೆರೆಯ ಭಾರತ್ ಕಾಲೋನಿ ನ್ಯಾಯಬೆಲೆ ಅಂಗಡಿಯಲ್ಲಿ ನಡೆಯುತ್ತಿದ್ದ ರೇಷನ್ ಮಾಫಿಯಾದ ಬಗ್ಗೆ ವರದಿ ಪ್ರಸಾರ ಮಾಡಿತ್ತು. ಈ ಅಂಗಡಿ ಮಾಲೀಕ  ಬಡವರ ಪಡಿತರ ಚೀಟಿಗಳನ್ನು ಇಟ್ಟುಕೊಂಡು ಸಾಲ ಕೊಡುವ ವ್ಯವಹಾರ ಮಾಡುತ್ತಿದ್ದ.

ಬೆಂಗಳೂರು(ಮಾ.26): ಸುವರ್ಣ ನ್ಯೂಸ್ ವಾಹಿನಿಯಲ್ಲಿ ಪ್ರತಿ ವಾರ ನೇರ ಪ್ರಸಾರವಾಗುತ್ತಿರುವ ವಿವಿಧ ಇಲಾಖೆಯ ಸಚಿವರುಗಳ ಹಲೋ ಮಿನಿಸ್ಟರ್ ಕಾರ್ಯಕ್ರಮಕ್ಕೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸ್ಟುಡಿಯೋದಲ್ಲಿ ತಮ್ಮ ಅಧೀನ ಅಧಿಕಾರಿಗಳೊಂದಿಗೆ ಕುಳಿತು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸುತ್ತಿರುವ ಮಂತ್ರಿಗಳಿಗೆ ನಾಗರಿಕರು ಸಹ ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ಇಂದು ನಮ್ಮ ಸ್ಟುಡಿಯೋದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್ ಹಲೋ ಮಿನಿಸ್ಟರ್ ಕಾರ್ಯಕ್ರಮಕ್ಕೆ ಹಾಜರಾಗಿ ದೂರವಾಣಿಹಾಗೂ ಫೇಸ್'ಬುಕ್ ಕಮೆಂಟ್'ಗಳ ಮೂಲಕ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುತ್ತಿದ್ದರು.

ಈ ಸಂದರ್ಭದಲ್ಲಿ ವಾಹಿನಿಯು ದಾವಣಗೆರೆಯ ಭಾರತ್ ಕಾಲೋನಿ ನ್ಯಾಯಬೆಲೆ ಅಂಗಡಿಯಲ್ಲಿ ನಡೆಯುತ್ತಿದ್ದ ರೇಷನ್ ಮಾಫಿಯಾದ ಬಗ್ಗೆ ವರದಿ ಪ್ರಸಾರ ಮಾಡಿತ್ತು. ಈ ಅಂಗಡಿ ಮಾಲೀಕಬಡವರ ಪಡಿತರ ಚೀಟಿಗಳನ್ನು ಇಟ್ಟುಕೊಂಡು ಸಾಲ ಕೊಡುವ ವ್ಯವಹಾರ ಮಾಡುತ್ತಿದ್ದ.

ಇದನ್ನು ಗಮನಿಸಿದ ಸಚಿವ ಯು.ಟಿ. ಖಾದರ್ ಅವರು ಮಾಲೀಕ ವೆಂಕಟೇಶ್ ನಾಯಕ್'ಗೆ ಇನ್ನು ಮುಂದೆ ಈ ರೀತಿ ಮಾಡಿದರೆ ಕ್ರಮ ದಾಖಲಿಸುವುದಾಗಿ ಎಚ್ಚರಿಕೆ ನೀಡಿದರು. ಇದೇ ಸಂದರ್ಭದಲ್ಲಿ ವರದಿ ಬಳಿಕ ಎಚ್ಚೆತ್ತುಕೊಂಡಆಹಾರ ಇಲಾಖೆ ಅಧಿಕಾರಿಗಳು ಮಾಲೀಕನ ವಿರುದ್ಧ ಆರ್'ಎಂಸಿ ಪೊಲೀಸ್ ಠಾಣೆಯಲ್ಲಿ ಐಪಿಸಿಸೆಕ್ಷನ್ 420, 34ಅಡಿ ಪ್ರಕರಣ ದಾಖಲಿಸಿದ್ದಾರೆ.