Asianet Suvarna News Asianet Suvarna News

ಉರಿ ಹುತಾತ್ಮ ಯೋಧರ ಕುಟುಂಬಗಳಿಗೆ ನೆರವಾಗಲು ವಿನೂತನ ಕಾರ್ಯಕ್ರಮ

Help For Uri Attack victims Family make a Concert

ಕಾಶ್ಮೀರ (ಸೆ.30): ಉರಿ ಹುತಾತ್ಮ ಯೋಧರ ಕುಟುಂಬಗಳಿಗಾಗಿ ನೆರವಾಗಲು ಸೂರತ್‌ನಲ್ಲಿ ನಿನ್ನೆ ಸಂಗೀತ ಕಚೇರಿ ನಡೆಯಿತು.

ಈ ಸಂಗೀತ ಕಚೇರಿಯಲ್ಲಿ ಗುಜರಾತಿ ಕಲಾವಿದರು ಕಾರ್ಯಕ್ರಮ ನಡೆಸಿಕೊಟ್ಟರು. ಈ ಕಾರ್ಯಕ್ರಮದಿಂದ ಸಂಗ್ರಹವಾಗಿದ್ದು ಎಷ್ಟು ಗೊತ್ತಾ? ಬರೋಬ್ಬರಿ 1 ಕೋಟಿ ರೂಪಾಯಿ.

ಉರಿ ದಾಳಿಯಲ್ಲಿ ಮೃತಪಟ್ಟ ಯೋಧರ ಕುಟುಂಬಗಳಿಗೆ ನೆರವು ನೀಡುವ ಸಲುವಾಗಿ ಈ ವಿಶೇಷ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಗುಜರಾತಿ ಕಲಾವಿದರು ನಡೆಸಿಕೊಟ್ಟ ಈ ಕಾರ್ಯಕ್ರಮವನ್ನು ಮಹೇಶ್ ಸಾವನಿ ಆಯೋಜಿಸಿದ್ದರು.

ಕಾರ್ಯಕ್ರಮ ನೋಡಲು ಆಗಮಿಸಿದ್ದ ಸಂಗೀತ ಪ್ರಿಯರು ನೆರವಿನ ಮಹಾಪೂರವನ್ನೇ ಹರಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಯಕ್ರಮದ ಆಯೋಜಕ ಮಹೇಶ್ ಸಾವನಿ, ಕಾರ್ಯಕ್ರಮದಲ್ಲಿ 1 ಕೋಟಿ ರೂ. ಮೊತ್ತ ಸಂದಾಯವಾಗಿದೆ. ಈ ಹಣವನ್ನು ಉರಿ ದಾಳಿಯಲ್ಲಿ ಹುತಾತ್ಮರಾದ ಕುಟುಂಬಗಳಿಗೆ ತಲುಪಿಸಲಾಗುತ್ತದೆ ಎಂದು ಹೇಳಿದ್ದಾರೆ.

Follow Us:
Download App:
  • android
  • ios