ಬಿಡಿಎ ರೂ.1,800 ಕೋಟಿ ವೆಚ್ಚದಲ್ಲಿ ಉಕ್ಕಿನ ಸೇತುವೆ ಯೋಜನೆ ಕೈಗೊಂಡಿರುವುದು ಸೂಕ್ತವಲ್ಲ. ಯೋಜನೆ ಜಾರಿ ಸಂಬಂಧ ಸಾರ್ವಜನಿಕರಿಂದ ಆಕ್ಷೇಪಣೆ, ಅಹ​ವಾಲು ಅಥವಾ ಸಲಹೆ ಪಡೆದುಕೊಂಡಿಲ್ಲ. ಇದು ಸಂವಿ​ಧಾನದ ಪರಿಚ್ಛೇದ 243 (ಝಡ್‌ ಇ)ರ ಸ್ಪಷ್ಟಉಲ್ಲಂಘನೆ. ಇಷ್ಟುದೊಡ್ಡ ಮೊತ್ತದಲ್ಲಿ ಈ ಯೋಜನೆ ಹಮ್ಮಿಕೊಳ್ಳುವ ಅಗತ್ಯವೂ ಇಲ್ಲ. ಸಾರ್ವಜನಿಕರಿಗೆ ಅಷ್ಟೇನೂ ಉಪಯೋ​ಗವಾಗುವುದಿಲ್ಲ. ಹೀಗಾಗಿ, ಯೋಜನೆ ಜಾರಿಯಿಂದ ಹಿಂದೆ ಸರಿಯುವಂತೆ ಬಿಡಿಎಗೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ಬೆಂಗಳೂರು (ಅ.20): ಬಸವೇಶ್ವರ ವೃತ್ತದಿಂದ ಹೆಬ್ಬಾಳದವರೆಗೂ ಉಕ್ಕಿನ ಸೇತು​ವೆ ನಿರ್ಮಾಣಕ್ಕೆ ಮುಂದಾಗಿರುವ ಬಿಡಿಎ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಇಂದು ವಿಚಾರಣೆ ನಡೆಸಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಿಡಿಎ ಉಕ್ಕಿನ ಸೇತುವೆ ನಿರ್ಮಿಸಲು ಉದ್ದೇಶಿಸಿರುವು​ದನ್ನು ಪ್ರಶ್ನಿಸಿ ನಮ್ಮ ಬೆಂಗಳೂರು ಪ್ರತಿಷ್ಠಾನ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಆದರೆ, ಕಾಲಾವಕಾಶದ ಕೊರತೆಯಿಂದ ಮುಖ್ಯ ನ್ಯಾಯಮೂರ್ತಿ ಎಸ್‌.ಕೆ.ಮುಖರ್ಜಿ ಮತ್ತು ನ್ಯಾ ಆರ್‌.ಬಿ.ಬೂದಿಹಾಳ್‌ ಅವರಿದ್ದ ವಿಭಾಗೀಯ ಪೀಠ, ಅರ್ಜಿಯನ್ನು ನಿನ್ನೆ ಮುಂದೂಡಿತ್ತು.

ಬಿಡಿಎ ರೂ.1,800 ಕೋಟಿ ವೆಚ್ಚದಲ್ಲಿ ಉಕ್ಕಿನ ಸೇತುವೆ ಯೋಜನೆ ಕೈಗೊಂಡಿರುವುದು ಸೂಕ್ತವಲ್ಲ. ಯೋಜನೆ ಜಾರಿ ಸಂಬಂಧ ಸಾರ್ವಜನಿಕರಿಂದ ಆಕ್ಷೇಪಣೆ, ಅಹ​ವಾಲು ಅಥವಾ ಸಲಹೆ ಪಡೆದುಕೊಂಡಿಲ್ಲ. ಇದು ಸಂವಿ​ಧಾನದ ಪರಿಚ್ಛೇದ 243 (ಝಡ್‌ ಇ)ರ ಸ್ಪಷ್ಟಉಲ್ಲಂಘನೆ. ಇಷ್ಟುದೊಡ್ಡ ಮೊತ್ತದಲ್ಲಿ ಈ ಯೋಜನೆ ಹಮ್ಮಿಕೊಳ್ಳುವ ಅಗತ್ಯವೂ ಇಲ್ಲ. ಸಾರ್ವಜನಿಕರಿಗೆ ಅಷ್ಟೇನೂ ಉಪಯೋ​ಗವಾಗುವುದಿಲ್ಲ. ಹೀಗಾಗಿ, ಯೋಜನೆ ಜಾರಿಯಿಂದ ಹಿಂದೆ ಸರಿಯುವಂತೆ ಬಿಡಿಎಗೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.