ರಾಜ್ಯ ಸರ್ಕಾರವು ಎಸಿಬಿಯನ್ನು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ‌ನಿವಾಸದಿಂದ ಹೆಬ್ಬಾಳ ಶಾಸಕ ವೈ.ಎ.ನಾರಾಯಣ ಸ್ವಾಮಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಬಿಜೆಪಿ ಮುಂದಾಗಿತ್ತು. ಆದರೆ ಎಂ.ಎಸ್.ರಾಮಯ್ಯ ಆಸ್ಪತ್ರೆ ಸರ್ಕಲ್​ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಅರ್ಧದಿಂದಲೇ ಬಿಜೆಪಿ ಕಾರ್ಯಕರ್ತರು ಬಿಎಸ್​ವೈ ನಿವಾಸದ ಬಳಿ ಹಿಂದಿರುಗಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರವು ಎಸಿಬಿಯನ್ನು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ‌ನಿವಾಸದಿಂದ ಹೆಬ್ಬಾಳ ಶಾಸಕ ವೈ.ಎ.ನಾರಾಯಣ ಸ್ವಾಮಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಬಿಜೆಪಿ ಮುಂದಾಗಿತ್ತು. ಆದರೆ ಎಂ.ಎಸ್.ರಾಮಯ್ಯ ಆಸ್ಪತ್ರೆ ಸರ್ಕಲ್​ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಅರ್ಧದಿಂದಲೇ ಬಿಜೆಪಿ ಕಾರ್ಯಕರ್ತರು ಬಿಎಸ್​ವೈ ನಿವಾಸದ ಬಳಿ ಹಿಂದಿರುಗಿದ್ದಾರೆ.

ಇನ್ನೊಂದು ಕಡೆ ಬಿಎಸ್’ವೈ ವಿರುದ್ಧ ಕಾಂಗ್ರೆಸ್ ಕೂಡ ಬೀದಿಗಿಳಿದಿದೆ. ಡಾಲರ್ಸ್ ಕಾಲೋನಿ ಪಾರ್ಕ್ ಸಮೀಪ ಬೆಂಗಳೂರು ಯುವ ಕಾಂಗ್ರೆಸ್​ನಿಂದ ಪ್ರತಿಭಟನೆಗೆ ಮುಂದಾಗಿದೆ. ಬಿಎಸ್​​​​​​ವೈ ನಿವಾಸದ ಎದುರು ಪ್ರತಿಭಟನೆಗೆ ಪೊಲೀಸರು ನಿರಾಕರಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಬಿಎಸ್​ವೈ ನಿವಾಸದತ್ತ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾನಿರತ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.