Asianet Suvarna News Asianet Suvarna News

ಖಾದರ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಹಿಂದೂ ಜಾಗರಣಾ ವೇದಿಕೆ ಮುಖಂಡ ಜಗದೀಶ್ ಕಾರಂತ್ ಬಂಧನ

ಪುತ್ತೂರು ಠಾಣೆ ಇನ್ಸ್​ಪೆಕ್ಟರ್​ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಹಿಂದೂ ಜಾಗರಣಾ ವೇದಿಕೆ ರಾಜ್ಯ ಸಂಚಾಲಕ ಜಗದೀಶ್ ಕಾರಂತರನ್ನು ಇಂದು ಬಂಧಿಸಲಾಗಿದೆ.

Hindu Jagarana Vedike Leader Jagadesh Karanth Arrest

ಬೆಂಗಳೂರು (ಸೆ.29): ಪುತ್ತೂರು ಠಾಣೆ ಇನ್ಸ್​ಪೆಕ್ಟರ್​ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಹಿಂದೂ ಜಾಗರಣಾ ವೇದಿಕೆ ರಾಜ್ಯ ಸಂಚಾಲಕ ಜಗದೀಶ್ ಕಾರಂತರನ್ನು ಇಂದು ಬಂಧಿಸಲಾಗಿದೆ.

ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಗ್ರಾಮಾಂತರ ಠಾಣೆಯ ಇನ್ಸ್​ಪೆಕ್ಟರ್ ಖಾದರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆ ಜಾಮೀನು ರಹಿತ ಕೇಸ್​ ದಾಖಲಿಸಲಾಗಿತ್ತು. ಈ ಹಿನ್ನೆಲೆ ಇವತ್ತು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದ್ದು, ಪುತ್ತೂರು ಪೊಲೀಸರು ಜಗದೀಶ್​ ಕಾರಂತ್ ಅವರನ್ನು ವಶಕ್ಕೆ ಪಡೆದಿದ್ದಾರೆ.  ಬಂಧನದ ನಂತ್ರ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಹಿನ್ನೆಲೆ ಪುತ್ತೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್​ ಮಾಡಲಾಗಿದೆ.

Follow Us:
Download App:
  • android
  • ios