ಟಿಪ್ಪು ಬಗ್ಗೆ ಅವಹೇಳನಕಾರಿ ಭಾಷಣ; ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ ; ಬಂಧನ ಖಂಡಿಸಿ ನಾಳೆ ಕೊಡಗು ಬಂದ್ 

ಕೊಡಗು (ನ. 13) : ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ ಖಂಡಿಸಿ ನಾಳೆ ಒಂದು ಗಂಟೆ ಕಾಲ ಕೊಡಗು ಬಂದ್ ಗೆ ಕರೆ ನೀಡಲಾಗಿದೆ. 

Add Asianetnews Kannada as a Preferred SourcegooglePreferred

ಟಿಪ್ಪು ಜಯಂತಿ ದಿನ ಗೋಣಿಕೊಪ್ಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂತೋಷ್ ತಮ್ಮಯ್ಯ ಅವಹೇಳನಕಾರಿ ಭಾಷಣ ಮಾಡಿರುವ ಆರೋಪ ಹೊತ್ತಿದ್ದು ನಿನ್ನೆ ತಡರಾತ್ರಿ ಅವರನ್ನು ಬಂಧಿಸಲಾಗಿದೆ. 

ಟಿಪ್ಪು ಜಯಂತಿ ವಿರೋಧಿ ಲೇಖನ: ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ

ಸಂತೋಷ್ ಬಂಧನ ಖಂಡಿಸಿ ನಾಳೆ ಮಧ್ಯಾಹ್ಯ 12 ರಿಂದ 1 ಗಂಟೆವರೆಗೆ ಒಂದು ಗಂಟೆ ಕಾಲ ಹಿಂದೂ ಸುರಕ್ಷಾ ವೇದಿಕೆ ಬಂದ್ ಗೆ ಕರೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಕೊಡವರ ವಿರುದ್ದ ಅವಹೇಳನಕಾರಿ ಮಾತನಾಡಿದ ಅಸೀಫ್ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ.