ಹಿರಿಯ ಗಾಂಧಿವಾದಿ ಡಾ. ಹೊ ಶ್ರೀನಿವಾಸಯ್ಯರವರು ಇಂದು ಮುಂಜಾನೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬೆಂಗಳೂರು(ಎ.06): ಹಿರಿಯ ಗಾಂಧಿವಾದಿ ಡಾ. ಹೊ ಶ್ರೀನಿವಾಸಯ್ಯರವರು ಇಂದು ಮುಂಜಾನೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೆಲವು ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸಾವಿರಾರು ಶಾಲಾ ಕಾಲೇಜುಗಳಲ್ಲಿ ಗಾಂಧಿ ತತ್ವಗಳ ಪ್ರಚಾರ ಮಾಡಿ ಯುವ ಪೀಳಿಗೆಗೆ ಮಹಾತ್ಮನ ವ್ಯಕ್ತಿತ್ವವನ್ನು ಪರಿಚಯಿಸಿದ್ದರು.
