ದೆಹಲಿಯ ಚಾಂದನಿ ಚೌಕ್ ಬಳಿ ಸಂಭವಿಸಿದ ಕೋಮು ಘರ್ಷಣೆ| ದೆಹಲಿ ಪೊಲೀಸ್ ಮುಖ್ಯಸ್ಥರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮನ್ಸ್| ಕಮಿಷನರ್ ಅಮುಲ್ಯಾ ಪಟ್ನಾಯಕ್’ಗೆ ಸಮನ್ಸ್ ಜಾರಿ ಮಾಡಿದ ಅಮಿತ್ ಶಾ| ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಕೋಮು ಘರ್ಷಣೆ| ಪರಿಸ್ಥಿತಿ ಶಾಂತವಾಗಿದೆ ಎಂದು ಕಮಿಷನರ್ ವಿವರಣೆ|

ನವದೆಹಲಿ(ಜು.03): ರಾಷ್ಟ್ರ ರಾಜಧಾನಿ ನವದೆಹಲಿಯ ಚಾಂದನಿ ಚೌಕ್’ನಲ್ಲಿ ಸಂಭವಿಸಿದ ಕೋಮು ಘರ್ಷಣೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ಮುಖ್ಯಸ್ಥರಿಗೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮನ್ಸ್ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಾಂದನಿ ಚೌಕ್ ಬಳಿಯ ಹೌಜ್ ಖಾಜಿ ಪ್ರದೇಶದಲ್ಲಿ ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ಮಧ್ಯೆ ಘರ್ಷಣೆ ಸಂಭವಿಸಿತ್ತು. ಘರ್ಷಣೆಯಲ್ಲಿ ಪಕ್ಕದ ದೇಗುಲವೊಂದಕ್ಕೆ ಹಾನಿ ಕೂಡ ಮಾಡಲಾಗಿತ್ತು. 

Scroll to load tweet…

ಈ ಕುರಿತು ವಿವರಣೆ ಕೋರಿ ಅಮಿತ್ ಶಾ ದೆಹಲಿ ಪೊಲೀಸ್ ಕಮಿಷನರ್ ಅಮುಲ್ಯಾ ಪಟ್ನಾಯಕ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.

ಘಟನೆಯ ಕುರಿತು ಮಾಹಿತಿ ನೀಡಿರುವ ಪಟ್ನಾಯಕ್, ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ನಾಲ್ಕು ಜನರನ್ನು ಬಂಧಿಸಲಾಗಿದ್ದು, ಪರಿಸ್ಥಿತಿ ಶಾಂತವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.