ಮಹಿಳಾ ಪೈಲಟ್‌ ಒಬ್ಬರ ಜಾಣ್ಮೆಯಿಂದ ಏರ್‌ ಇಂಡಿಯಾ-ವಿಸ್ತಾರ ವಿಮಾನಗಳ ನಡುವೆ ಆಕಾಶದಲ್ಲೇ ಸಂಭವಿಸಬಹುದಾಗಿದ್ದ ಭೀಕರ ಅಪಘಾತವೊಂದು ತಪ್ಪಿದೆ. ಏರಿಂಡಿಯಾದ ಕ್ಯಾಪ್ಟನ್‌ ಅನುಪಮಾ ಕೊಹ್ಲಿ ಅವರ ಸಮಯ ಪ್ರಜ್ಞೆಯಿಂದ ಎರಡೂ ವಿಮಾನಗಳಲ್ಲಿನ 261 ಪ್ರಯಾಣಿಕರ ಜೀವ ಉಳಿದಿದೆ.

ನವದೆಹಲಿ: ಮಹಿಳಾ ಪೈಲಟ್‌ ಒಬ್ಬರ ಜಾಣ್ಮೆಯಿಂದ ಏರ್‌ ಇಂಡಿಯಾ-ವಿಸ್ತಾರ ವಿಮಾನಗಳ ನಡುವೆ ಆಕಾಶದಲ್ಲೇ ಸಂಭವಿಸಬಹುದಾಗಿದ್ದ ಭೀಕರ ಅಪಘಾತವೊಂದು ತಪ್ಪಿದೆ. ಏರಿಂಡಿಯಾದ ಕ್ಯಾಪ್ಟನ್‌ ಅನುಪಮಾ ಕೊಹ್ಲಿ ಅವರ ಸಮಯ ಪ್ರಜ್ಞೆಯಿಂದ ಎರಡೂ ವಿಮಾನಗಳಲ್ಲಿನ 261 ಪ್ರಯಾಣಿಕರ ಜೀವ ಉಳಿದಿದೆ.

Add Asianetnews Kannada as a Preferred SourcegooglePreferred

ಫೆ. 7ರಂದು ಮುಂಬೈ ವಾಯುವಲಯದಲ್ಲಿ ವಿಸ್ತಾರ ಮತ್ತು ಏರಿಂಡಿಯಾ ವಿಮಾನಗಳು, ವೈಮಾನಿಕ ನಿಯಮಗಳಿಗೆ ವಿರುದ್ಧವಾಗಿ ಪರಸ್ಪರ ಕೇವಲ 100 ಅಡಿ ಅಂತರದಲ್ಲೇ ಹಾರಾಟ ನಡೆಸುತ್ತಿದ್ದವು. ಈ ವೇಳೆ ವಿಮಾನದಲ್ಲಿನ ಸ್ವಯಂಚಾಲಿತ ಎಚ್ಚರಿಕೆ ವ್ಯವಸ್ಥೆಯ ನೀಡಿದ ಸಂದೇಶವನ್ನು ತಕ್ಷಣವೇ ಗಮಿನಿಸಿದ ಏರಿಂಡಿಯಾದ ಮಹಿಳಾ ಕ್ಯಾಪ್ಟನ್‌ ಅನುಪಮಾ ಕೊಹ್ಲಿ, ತಕ್ಷಣವೇ ತಮ್ಮ ವಿಮಾನವನ್ನು ಸುರಕ್ಷಿತ ದೂರಕ್ಕೆ ಕೊಂಡೊಯ್ಯುವ ಮೂಲಕ ಸಂಭವನೀಯ ಅಪಘಾತವನ್ನು ತಪ್ಪಿಸಿದ್ದಾರೆ.

ಈ ಘಟನೆ ನಡೆಯುವಾಗ ವಿಸ್ತಾರ ವಿಮಾನದಲ್ಲಿ 152 ಪ್ರಯಾಣಿಕರು ಮತ್ತು ಏರಿಂಡಿಯಾದಲ್ಲಿ 109 ಪ್ರಯಾಣಿಕರು ಇದ್ದರು. ಘಟನೆ ಕುರಿತು ಇದೀಗ ತನಿಖೆಗೆ ಆದೇಶಿಸಲಾಗಿದೆ.