ರೇವಣ್ಣ ಅವರನ್ನು ಉತ್ತರ ವಲಯದ ಐಜಿಪಿ ಪ್ರಭಾರಿಯಾಗಿ ನಿಯೋಜಿಸಿ ರಾಜ್ಯ ಸರ್ಕಾರವು ಗುರುವಾರ ಆದೇಶ ಹೊರಡಿಸಿದೆ.

ಬೆಂಗಳೂರು : ಅಗ್ನಿ ಶಾಮಕ ದಳದ ಡಿಐಜಿಪಿ ಎಚ್‌.ಎಸ್‌.ರೇವಣ್ಣ ಅವರನ್ನು ಉತ್ತರ ವಲಯದ ಐಜಿಪಿ ಪ್ರಭಾರಿಯಾಗಿ ನಿಯೋಜಿಸಿ ರಾಜ್ಯ ಸರ್ಕಾರವು ಗುರುವಾರ ಆದೇಶ ಹೊರಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಉತ್ತರ ಐಜಿಪಿಯಾಗಿದ್ದ ಅಲೋಕ್‌ ಕುಮಾರ್‌ ಅವರನ್ನು ಸಿಸಿಬಿ ಮುಖ್ಯಸ್ಥರನ್ನಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಿದ ನಂತರ ಆ ಸ್ಥಾನಕ್ಕೆ ಬೇರೊಬ್ಬರ ನೇಮಕವಾಗಿರಲಿಲ್ಲ. 

ಈ ತಿಂಗಳ 10ರಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೇಮಕ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.