‘ನಾನು  ಜನರಿಂದ ಚುನಾಯಿತನಾದ ಮುಖ್ಯಮಂತ್ರಿ, ಭಯೋತ್ಪಾದಕನಲ್ಲ’ ಹೀಗೆಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿಧಾನಸಭೆಯಲ್ಲಿ ಹೇಳಿರುವ ಪ್ರಸಂಗ ನಡೆದಿದೆ. ಅತಿಥಿ ಶಿಕ್ಷಕರನ್ನು ಖಾಯಂಗೊಳಿಸುವ ಮಸೂದೆಯನ್ನು ಮಂಡಿಸಿದಾಗ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ವಿರೋಧಿಸಿದಾಗ, ನಾನು ಸಿಎಂ, ಭಯೋತ್ಪಾದಕನಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ನವದೆಹಲಿ (ಅ.04): ‘ನಾನು ಜನರಿಂದ ಚುನಾಯಿತನಾದ ಮುಖ್ಯಮಂತ್ರಿ, ಭಯೋತ್ಪಾದಕನಲ್ಲ’ ಹೀಗೆಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿಧಾನಸಭೆಯಲ್ಲಿ ಹೇಳಿರುವ ಪ್ರಸಂಗ ನಡೆದಿದೆ. ಅತಿಥಿ ಶಿಕ್ಷಕರನ್ನು ಖಾಯಂಗೊಳಿಸುವ ಮಸೂದೆಯನ್ನು ಮಂಡಿಸಿದಾಗ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ವಿರೋಧಿಸಿದಾಗ, ನಾನು ಸಿಎಂ, ಭಯೋತ್ಪಾದಕನಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು ನಡೆದ ವಿಧಾನಸಭಾ ಅಧಿವೇಶನದಲ್ಲಿ ಲೆಫ್ಟಿನೆಂಟ್ ಗವರ್ನರ್, ಬಿಜೆಪಿ ಹಾಗೂ ಅಧಿಕಾರಿಗಳ ವಿರುದ್ಧ ಕೇಜ್ರಿವಾಲ್ ಕಿಡಿ ಕಾರಿದ್ದಾರೆ. ಇದರಿಂದ ಸಿಟ್ಟುಗೊಂಡ ಪ್ರತಿಪಕ್ಷ ನಾಯಕರು ವಿಧಾನಸಭೆಯಿಂದ ಹೊರ ಹೋಗಿದ್ದಾರೆ. ನಾವು ದೆಹಲಿ ಆಡಳಿತ ನಡೆಸುವವರು, ಅಧಿಕಾರಿಗಳಲ್ಲ ಎಂದಾಗ ಆಮ್ ಆದ್ಮಿ ಪಕ್ಷದ ಶಾಸಕರು ಜೋರಾಗಿ ಚಪ್ಪಾಳೆ ತಟ್ಟಿದರು.

ಸುಮಾರು 15 ಸಾವಿರ ಅತಿಥಿ ಶಿಕ್ಷಕರನ್ನು ಖಾಯಂಗೊಳಿಸುವ ಮಸೂದೆಯನ್ನು ವಿಧಾನಸಭೆಯಲ್ಲಿಂದು ಮಂಡಿಸಲಾಯಿತು. ಇದಕ್ಕೆ ಅನುಮೋದನೆ ಸಿಕ್ಕಿದೆ.