ನಗರದಲ್ಲಿ ಸಾರ್ವಜನಿಕರಿಗೆ ರಕ್ಷಣೆ ನೀಡುವ ಸಲುವಾಗಿ ರೂಪುಗೊಂಡಿರುವ ‘ಐ-ವಿವೇಕ’ ವೆಬ್ಸೈಟ್ ಅನಾವರಣಗೊಳಿಸಿ ಮಾತನಾಡಿದರು.
ಬೆಂಗಳೂರು(ಮೇ.03): ನನಗೆ ಕಂಪ್ಯೂಟರ್ ಆಪರೇಟ್ ಮಾಡೋದು ಗೊತ್ತಿಲ್ಲಾ, ನಾನು ಕಂಪ್ಯೂಟರ್ ಕಲಿಯಕ್ಕೂ ಹೋಗಲಿಲ್ಲ ಅಲ್ಲದೆ ಹಣಕಾಸು ಮಂತ್ರಿಯಾದ ಸಂದರ್ಭದಲ್ಲೂ ಕಲಿಯಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಸಾರ್ವಜನಿಕರಿಗೆ ರಕ್ಷಣೆ ನೀಡುವ ಸಲುವಾಗಿ ರೂಪುಗೊಂಡಿರುವ ‘ಐ-ವಿವೇಕ’ ವೆಬ್ಸೈಟ್ ಅನಾವರಣಗೊಳಿಸಿ ಮಾತನಾಡಿದರು. ಸಂಸ್ಥೆಗಳು ಜನರಿಗೆ ವಂಚನೆ ಮಾಡುವ ಪ್ರಕರಣಗಳು ಬೆಳಕಿಗೆ ಬಂದಿವೆ. ಇಂತಹ ಸಂಸ್ಥೆಗಳ ವಿರುದ್ಧ ವೆಬ್ಸೈಟ್ನಲ್ಲಿ ದೂರು ದಾಖಲಿಸಬಹುದು ಎಂದರು.
ಗೃಹ ಸಚಿವ ಪರಮೇಶ್ವರ್, ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಠಿಯಾ ಸೇರಿದಂತೆ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
