ಬಿಜೆಪಿ ನೀಡಿದ ಆಹ್ವಾನ ತಿರಸ್ಕರಿಸಿದ್ದೇನೆ : ಕಾಂಗ್ರೆಸ್ ಮುಖಂಡ
ಕಾಂಗ್ರೆಸ್- ಬಿಜೆಪಿ ಪಕ್ಷದವರು ಒಂದೇ ಕಡೆಗೆ ಸೇರಬಾರದು ಎಂಬ ನಿಯಮ ಏನಾದರೂ ಇದೆಯಾ ಎಂದು ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ ಪ್ರಶ್ನಿಸಿದ್ದಾರೆ. ಅಲ್ಲದೇ ನನಗೂ ಹಿಂದೆ ಬಿಜೆಪಿಯಿಂದ ಆಹ್ವಾನ ಬಂದಿತ್ತು. ನಾನು ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ವಿಜಯಪುರ: ಜಾರಕಿಹೊಳಿ ಹಾಗೂ ಶ್ರೀರಾಮುಲು ಒಂದೇ ಸಮಾಜಕ್ಕೆ ಸೇರಿದವರು. ಸಮಾಜದ ಹಿತದೃಷ್ಟಿ ಯಿಂದ ಅವರು ಒಂದೇ ಕಡೆ ಸೇರಿರಬಹುದು.
ಕಾಂಗ್ರೆಸ್- ಬಿಜೆಪಿ ಪಕ್ಷದವರು ಒಂದೇ ಕಡೆಗೆ ಸೇರಬಾರದು ಎಂಬ ನಿಯಮ ಏನಾದರೂ ಇದೆಯಾ ಎಂದು ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿ ಯೂರಪ್ಪ ಹಾಗೂ ನಾನು ಈ ಹಿಂದೆ ಒಂದೇ ವಿಮಾನ ದಲ್ಲಿ ಪ್ರಯಾಣ ಮಾಡಿದ್ದೇವೆ.
ಹಾಗೆಂದ ಮಾತ್ರಕ್ಕೆ ನಮ್ಮಿಬ್ಬರ ನಡುವೆ ಏನಾದರೂ ಇದೆಯಾ? ಬಿಜೆಪಿ ಯವರು ತನಗೆ ತಮ್ಮ ಪಕ್ಷಕ್ಕೆ ಬರುವಂತೆ ಆಹ್ವಾನಿಸಿದ್ದನ್ನು ವಿನಮ್ರದಿಂದ ತಿರಸ್ಕರಿಸುತ್ತೇನೆ. ನಾನು ಬಿಜೆಪಿ ಸೇರುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು.