ಬೆಂಗಳೂರು (ಸೆ.21): ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ. ವಿಧಾನಮಂಡಲದಲ್ಲಿ ಸಿಎಂ ನಿರ್ಧಾರವನ್ನು ಬೆಂಬಲಿಸುತ್ತೇವೆ ಎಂದು ಬಿಎಸ್'ವೈ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯ ಸರ್ಕಾರದ ನಡೆಗೆ ನಮ್ಮ ಅಸಮಾಧಾನವಿದೆ. ಕೇಂದ್ರಕ್ಕೂ ಕಾವೇರಿಗೂ ಯಾವುದೇ ಸಂಬಂಧವಿಲ್ಲ ಎಂದು ಸುವರ್ಣನ್ಯೂಸ್​ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​ವೈ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚಿಸುತ್ತೇವೆ. ಕಾವೇರಿ ವಿಷಯದಲ್ಲಿ ಪ್ರಧಾನಿ ಮಧ್ಯಪ್ರವೇಶ ಸಾಧ್ಯವಿಲ್ಲ. ಮೋದಿ ಸೇರಿದಂತೆ ಇತರ ನಾಯಕರನ್ನು ಸಂಪರ್ಕಿಸಿದ್ದೇವೆ

ಎಂದು ಹೇಳಿದರು. .

ಸರ್ವಪಕ್ಷ ಸಭೆ ಬಗ್ಗೆ ನಮಗೆ ನಂಬಿಕೆ ಇಲ್ಲ . ನಮ್ಮ ಸಲಹೆಗಳನ್ನು ಅವರು ಸ್ವೀಕರಿಸುವುದಿಲ್ಲ. ಹಾಗಾಗಿ ಇಂದು ನಡೆದ ಸರ್ವಪಕ್ಷ ಸಭೆಗೆ ಹಾಜರಾಗಿಲ್ಲ ಎಂದು ಬಿಎಸ್​ವೈ ಸ್ಪಷ್ಟನೆ ನೀಡಿದ್ದಾರೆ.