ಪಾಕ್ ನಿಂದ ತವರು ನಾಡಿಗೆ ಮರಳಿದ್ದ ಅಭಿ| ವೈದ್ಯಕೀಯ ಪರೀಕ್ಷೆ ಮುಗಿಸಿ ರಜೆಯಲ್ಲಿದ್ದ  ವಿಂಗ್ ಕಮಾಂಡರ್| ರಜೆಯಲ್ಲಿದ್ದರೂ ಮನೆಬಿಟ್ಟು ಸೇನೆ ಸೇರಿಕೊಂಡ ಕಮಾಂಡರ್‌ ಅಭಿನಂದನ್‌

ಶ್ರೀನಗರ[ಮಾ.27]: ಇತ್ತೀಚೆಗಷ್ಟೇ ಪಾಕ್‌ ವಶದಿಂದ ಬಿಡುಗಡೆಯಾಗಿ ಬಂದು, 4 ವಾರಗಳ ರಜೆಯ ಮೇಲೆ ತೆರಳಿದ್ದ ಭಾರತೀಯ ವಾಯುಪಡೆಯ ವಿಂಗ್‌ಕಮಾಂಡರ್‌ ಅಭಿನಂದನ್‌, ಮತ್ತೆ ತಮ್ಮ ಸ್ಕ್ವಾಡ್ರನ್‌ ಸೇರಿಕೊಂಡಿದ್ದಾರೆ.

Add Asianetnews Kannada as a Preferred SourcegooglePreferred

ರಜೆಯ ಅವಧಿಯನ್ನು ಚೆನ್ನೈನಲ್ಲಿನ ಕುಟುಂಬ ಸದಸ್ಯರ ಜೊತೆ ಕಳೆಯುವ ಬದಲು ಅಭಿನಂದನ್‌ ಅವರು ಸೇನಾ ನೆಲೆಯಲ್ಲೇ ಇರಲು ಬಯಸಿ, ಶ್ರೀನಗರಕ್ಕೆ ಆಗಮಿಸಿದ್ದಾರೆ. ಪುಲ್ವಾಮಾ ದಾಳಿ ಬಳಿಕ ಭಾರತದ ವಾಯುನೆಲೆ ಮೇಲೆ ದಾಳಿಗೆ ಬಂದಿದ್ದ ಪಾಕಿಸ್ತಾನ ಎಫ್‌-16 ಯುದ್ಧ ವಿಮಾನವೊಂದನ್ನು ಬೆನ್ನಟ್ಟಿಹೋಗಿದ್ದ ಅಭಿ, ಪಾಕ್‌ ಯೋಧರ ಕೈಗೆ ಸಿಕ್ಕಿಬಿದ್ದಿದ್ದರು.

ಎರಡು ದಿನಗಳ ಕಾಲ ಅವರನ್ನು ತನ್ನ ವಶದಲ್ಲಿ ಇಟ್ಟುಕೊಂಡಿದ್ದ ಪಾಕ್‌, ಅವರಿಗೆ ಭಾರೀ ಮಾನಸಿಕ ಹಿಂಸೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಕೆಲ ಪರೀಕ್ಷೆಗೆ ಗುರಿಪಡಿಸಿದ ಬಳಿಕ ನಾಲ್ಕು ವಾರಗಳ ಅನಾರೋಗ್ಯ ರಜೆ ಮೇಲೆ ಮನೆಗೆ ಕಳುಹಿಸಲಾಗಿತ್ತು.