ಅವಕಾಶವಿದ್ದರೆ ಕಾಶ್ಮೀರಿಗಳು ಪ್ರತ್ಯೇಕವಾಗಲು ಬಯಸುತ್ತಾರೆ : ಕಾಂಗ್ರೆಸ್ ಮುಖಂಡ
ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಕೇಂದ್ರ ಸಚಿವ ಸೈಫುದ್ದಿನ್ ಸೋಜ್ ಕಾಶ್ಮೀರದ ವಿಚಾರವಾಗಿ ನೀಡಿದ ಹೇಳಿಕೆಯೊಂದು ಇದೀಗ ವಿವಾದಕ್ಕೆ ಈಡಾಗಿದೆ.
ನವದೆಹಲಿ : ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಕೇಂದ್ರ ಸಚಿವ ಸೈಫುದ್ದಿನ್ ಸೋಜ್ ಕಾಶ್ಮೀರದ ವಿಚಾರವಾಗಿ ನೀಡಿದ ಹೇಳಿಕೆಯೊಂದು ಇದೀಗ ವಿವಾದಕ್ಕೆ ಈಡಾಗಿದೆ.
ಕಾಶ್ಮೀರಿಗಳು ಪಾಕಿಸ್ತಾನದೊಂದಿಗೆ ಸೇರಲು ಬಯಸುವುದಿಲ್ಲ. ಅವರ ಮೊದಲ ಆದ್ಯತೆ ಸ್ವತಂತ್ರವಾಗುವುದು ಎಂದು ಈ ಹಿಂದೆ ಮುಷರಫ್ ಹೇಳಿದ್ದ ಹೇಳಿಕೆಯನ್ನೇ ಅವರು ಸಮರ್ಥನೆ ಮಾಡಿಕೊಂಡಿದ್ದಾರೆ.
ಈಗ ಅದೇ ರೀತಿ ಹೇಳಿಕೆ ನೀಡಿದ ಮಾಜಿ ಸಚಿವರೂ ಹಾಗೂ ಕಾಂಗ್ರೆಸ್ ಮುಖಂಡರೂ ಆದ ಸೈಫುದ್ದಿನ್ ಕಾಶ್ಮೀರಿಗಳಿಗೆ ಅವಕಾಶ ಕೊಟ್ಟರೆ ಅವರು ಸ್ವತಂತ್ರರಾಗಲು ಬಯಸುತ್ತಾರೆ ಎಂದು ಹೇಳಿದ್ದಾರೆ.
2007ರಲ್ಲಿ ಮುಷರಫ್ ಈ ಹೇಳಿಕೆ ನೀಡಿದ್ದರು. ಅಂದಿನ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ಇಸ್ಲಮಬಾದ್ ಶೃಂಗ ಸಭೆಗಾಗಿ ಭೇಟಿ ನೀಡಲು ನಿರ್ಣಯಿಸಿದ್ದ ವೇಳೆ ಇಂತಹ ಹೇಳಿಕೆ ನೀಡಿದ್ದರು. ಇದೀಗ ಕಾಂಗ್ರೆಸ್ ಹಿರಿಯ ಮುಖಂಡ ಅಂತಹದ್ದೇ ಹೇಳಿಕೆ ನೀಡಿರುವುದು ವಿವಾದಕ್ಕೆ ಈಡಾಗಿದೆ.