ರಾಜ್ಯದಲ್ಲಿ ಪೌರತ್ವ ಕಾಯ್ದೆಯನ್ನು ಅಂಗೀಕಾರ ಮಾಡದಿದ್ದಲ್ಲಿ  ಮುಂದಿನ 5 ವರ್ಷದಲ್ಲಿ ಅಸ್ಸಾಂನಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರಾಗಬೇಕಾದ ಸ್ಥಿತಿ ನಿರ್ಮಾಣವಾಗಲಿದೆ ಎಂದು ಅಸ್ಸಾಂ ಸಚಿವರೋರ್ವರು ಆತಂಕ ವ್ಯಕ್ತಪಡಿಸಿದ್ದಾರೆ.

ಗುವಾಹಟಿ[ಜ.08]: ರಾಜ್ಯದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಅಂಗೀಕರಿಸದೇ ಹೋದಲ್ಲಿ ಮುಂದಿನ 5 ವರ್ಷದಲ್ಲಿ ಅಸ್ಸಾಂನಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರಾಗಬೇಕಾದ ಸ್ಥಿತಿ ನಿರ್ಮಾಣವಾಗಲಿದೆ ಎಂದು ರಾಜ್ಯದ ಹಿರಿಯ ಸಚಿವ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪೌರತ್ವ ಮಸೂದೆಗೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿದ ಶರ್ಮಾ, ಈ ಕಾಯ್ದೆ ಜಾರಿಯಾಗದೇ ಹೋದಲ್ಲಿ, ರಾಜ್ಯವನ್ನು ಮತ್ತೊಂದು ಕಾಶ್ಮೀರ ಮಾಡಲು ಬಯಸಿದ್ದವರಿಗೆ ಬಹಳ ನೆರವಾಗಲಿದೆ ಎಂದು ಮಸೂದೆ ವಿರೋಧಿಸುವವರಿಗೆ ಟಾಂಗ್‌ ನೀಡಿದ್ದಾರೆ.

ಪಾಕ್‌, ಬಾಂಗ್ಲಾ, ಆಫ್ಘನ್‌ನ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ

ಭಾರತದಲ್ಲಿ 6 ವರ್ಷದಿಂದ ನೆಲೆಸಿರುವ ಬಾಂಗ್ಲಾ, ಆಷ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ಮೂಲದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡಲು ಸಲುವಾಗಿ ಪೌರತ್ವ ಕಾಯ್ದೆ ತಿದ್ದುಪಡಿಗೆ ನಿರ್ಧರಿಸಲಾಗಿದೆ. ಹಾಲಿ ನಿಯಮಗಳ ಅನ್ವಯ, 12 ವರ್ಷದಲ್ಲಿ ಭಾರತದಲ್ಲಿ ನೆಲೆಸಿದ್ದವರಿಗೆ ಮಾತ್ರ ಈ ಅವಕಾಶ ಸಿಗುತ್ತಿತ್ತು. ಅದನ್ನೀಗ 6 ವರ್ಷಕ್ಕೆ ಇಳಿಸಲಾಗಿದೆ.