ನನಗೆ ಸಚಿವ ಸ್ಥಾನ ನೀಡಬೇಕು ಎಂದು ಯಾವುದೇ ಕಾನೂನು ಇಲ್ಲ ಎಂದು ಬಿಜೆಪಿ ಮುಖಂಡ ಹೇಳಿದ್ದಾರೆ. ಬಹುತೇಕ ಮಂತ್ರಿ ಮಂಡಲಕ್ಕೆ ಸೇರುವುದು ಖಚಿತ ಎಂದೇ ಭಾವಿಸಲಾಗಿದ್ದ ಮುಖಂಡಗೆ ಸಚಿವ ಸ್ಥಾನ ತಪ್ಪಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ನವದೆಹಲಿ [ಆ.22]:  ಸರ್ಕಾರ ರಚನೆಯಲ್ಲಿ ನನ್ನ ಪಾತ್ರ ಇದೆ ಅಂದ ತಕ್ಷಣ ನನಗೆ ಸಚಿವ ಸ್ಥಾನ ಕೊಡಬೇಕು ಅಂತ ಯಾವುದೇ ಕಾನೂನು ಇಲ್ಲ!

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೀಗೆಂದವರು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌. ದೆಹಲಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಅರ್ಧವಾಗಿದೆ. ಇನ್ನೂ ಪೂರ್ಣವಾಗಿ ಆಗಬೇಕಿದೆ. ಬಿಜೆಪಿ ಸರ್ಕಾರದಲ್ಲಿ ಯಾವುದೇ ಭಿನ್ನಮತವಿಲ್ಲ. ಬಿ.ಎಸ್‌.ಯಡಿಯೂರಪ್ಪ ಸರ್ಕಾರ ತನ್ನ ಅಧಿಕಾರಾವಧಿ ಪೂರ್ಣಗೊಳಿಸಲಿದೆ ಎಂದರು. 

‘ಅತೃಪ್ತ ಪ್ರೇತಾತ್ಮಕ್ಕೆ ಸಚಿವ ಸ್ಥಾನ ನೀಡಲು ಅರ್ಹರ ಕಡೆಗಣನೆ’

ರಾಜ್ಯ ಸರ್ಕಾರ ರಚನೆಯಲ್ಲಿ ನನ್ನ ಪಾತ್ರ ಇದೆ ಅಂದ ತಕ್ಷಣ ಸಚಿವ ಸ್ಥಾನ ಕೊಡಬೇಕು ಅಂತ ಯಾವುದೇ ಕಾನೂನು ಇಲ್ಲ. ಪಕ್ಷದ ಕಾರ್ಯಕರ್ತನಾಗಿ ನಾನು ಕೆಲಸ ಮಾಡಿಕೊಂಡು ಹೋಗುತ್ತಿದ್ದೇನೆ ಎಂದರು. 

ಇದೇ ವೇಳೆ ಅನರ್ಹ ಶಾಸಕರ ಜತೆಗೆ ದೆಹಲಿಗೆ ಬಂದಿರುವ ವಿಚಾರವಾಗಿ ಈ ವೇಳೆ ಪತ್ರಕರ್ತರು ಪ್ರಶ್ನಿಸಿದಾಗ, ಅವರು ನಮ್ಮ ಸ್ನೇಹಿತರು. ಅವರು ಈಗ ತೊಂದರೆಯಲ್ಲಿದ್ದಾರೆ. ಅವರಿಗೆ ಮಾನಸಿಕ ಬೆಂಬಲ ಕೊಡಲು ನಾನು ಜತೆಗೆ ಬಂದಿದ್ದೇನೆ ಎಂದು ತಿಳಿಸಿದರು.