ಶಾಸಕ ಸ್ಥಾನ ತ್ಯಜಿಸಲು ಸಿದ್ಧವಾಗಿರುವುದು ಕೈ ನಾಯಕ ಹೇಳಿದ್ದಾರೆ. 

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಪರಾಭವಗೊಂಡ ಕಾಂಗ್ರೆಸ್‌ ಅಭ್ಯರ್ಥಿ, ಮಾಜಿ ಸಂಸದ ಧ್ರುವನಾರಾಯಣ್‌ ಅವರಿಗೆ ಶಾಸಕ ಸ್ಥಾನವನ್ನು ಬಿಟ್ಟುಕೊಡಲು ಸಿದ್ಧರಿರುವುದಾಗಿ ವಿಧಾನ ಪರಿಷತ್‌ ಸದಸ್ಯ ಆರ್‌. ಧರ್ಮಸೇನ ತಿಳಿಸಿದ್ದಾರೆ. 

Add Asianetnews Kannada as a Preferred SourcegooglePreferred

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರ ಮಟ್ಟದಲ್ಲಿ ಉತ್ತಮ ಸಂಸದರೆಂದು ಹೆಸರು ಮಾಡಿ, ಸಾಕಷ್ಟುಅಭಿವೃದ್ಧಿ ಕಾರ್ಯ ಕೈಗೊಂಡವರು ಅಧಿಕಾರದಲ್ಲಿರಬೇಕೆ ಹೊರತು ಐದು ವರ್ಷ ಸುಮ್ಮನೆ ಕೂರುವುದು ಇಷ್ಟವಿಲ್ಲ. ಈ ಹಿನ್ನೆಲೆಯಲ್ಲಿ ನನ್ನ ಸ್ಥಾನವನ್ನು ಅವರಿಗೆ ಬಿಟ್ಟುಕೊಡಲು ಸಿದ್ಧ ಎಂದು ತಿಳಿಸಿದರು. 

ರಾಜ್ಯದಲ್ಲಿ ಐದು ವರ್ಷದವರೆಗೆ ಯಾವುದೇ ಚುನಾವಣೆ ನಡೆಯುವ ಸಾಧ್ಯತೆ ಇಲ್ಲ. ಈಗ ರಾಷ್ಟ್ರ ಮತ್ತು ರಾಜ್ಯದಲ್ಲಿ ಹೆಸರು ಮಾಡಿದ ಸಜ್ಜನ ರಾಜಕಾರಣಿಯು ಅಲ್ಲಿಯವರೆಗೆ ಸುಮ್ಮನೆ ಇರಬೇಕಾಗಿದೆ. ಈ ರೀತಿ ಆಗಬಾರದೆಂಬ ದೃಷ್ಟಿಯಿಂದ ತಾವು ಈ ನಿರ್ಧಾರಕ್ಕೆ ಬಂದಿದ್ದು, ಅದನ್ನು ಪಕ್ಷದ ವರಿಷ್ಠರ ಗಮನಕ್ಕೆ ತರಲಾಗುವುದು ಎಂದರು.