Asianet Suvarna News Asianet Suvarna News

ಐಎಂಎ ವಂಚನೆ: ಬಂಧಿತ ಡಿಸಿ ಬಳಿ ಸಿಕ್ಕಿದ್ದು ಬರೋಬ್ಬರಿ 2.5 ಕೋಟಿ!

ಐಎಂಎ ಬಹುಕೋಟಿ ವಂಚನೆ ಪ್ರಕರಣ ಮತ್ತೆ ತಿರುವು ಪಡೆದುಕೊಂಡಿದೆ. ಬಂಧಿತ ಬೆಂಗಳೂರು ಡಿಸಿಯಾಗಿದ್ದ ವಿಜಯ್ ಶಂಕರ್ ಅವರಿಂದ 2.5 ಕೋಟಿ ರೂ. ಜಪ್ತಿ ಮಾಡಿಕೊಳ್ಳಲಾಗಿದೆ.

ima-fraud-case-2-5-crore-amount-seized-from-dc-vijay-shankar
Author
Bengaluru, First Published Jul 12, 2019, 11:40 PM IST

ಬೆಂಗಳೂರು[ಜು. 12] ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಡಿಸಿ ವಿಜಯ್ ಶಂಕರ್ ಅವರಿಗೆ ಅರ್ಜಿ  ವಜಾದ  ಶಾಕ್ ಮಧ್ಯಾಹ್ನ ಸಿಕ್ಕಿದ್ದರೆ ಸಂಜೆ ರಾತ್ರಿ ವೇಳೆಗೆ ಜಪ್ತಿ ಬಹುದೊಡ್ಡ ಆಘಾತ ನೀಡಿದೆ.

ಐಎಂಎ ಮತ್ತು ಅಡೋನಿ ಎರಡೂ ಸಂಸ್ಥೆಗಳು ಸಹಭಾಗಿತ್ವ ವಹಿಸಿ ನಗರದಲ್ಲಿ ಫ್ಲೈ ಓವರ್ ನಿರ್ಮಾಣದ ಗುತ್ತಿಗೆ ಪಡೆದಿದ್ದವು. ಇದಕ್ಕಾಗಿ ಅಡೋನಿ ಸಂಸ್ಥೆಗೆ ಐಎಂಎ ಸಂಸ್ಥೆ ಮುಂಗಡವಾಗಿ 1.5 ಕೋಟಿ ರೂ. ನೀಡಿತ್ತು. ಈ ಸಂಸ್ಥೆಗಳಿಗೆ ಫ್ಲೈ ಓವರ್​ ಗುತ್ತಿಗೆ ನೀಡಲು ವಿಜಯ್​ ಶಂಕರ್​ 2.5 ಕೋಟಿ ಲಂಚ ಪಡೆದಿದ್ದರು ಎಂಬ ಆರೋಪವೂ ಕೇಳಿ  ಬಂದಿದೆ. ಈಗ  ವಿಜಯ್ ಶಂಕರ್ ಅವರಿಗೆ ಸೇರಿದ್ದು ಎನ್ನಲಾದ 2.5 ಕೋಟಿ ರೂ. ಹಣ ಜಪ್ತಿ ಮಾಡಲಾಗಿದೆ.

ಜಾಮೀನು ಅರ್ಜಿ ವಜಾ, ಆವರಣದಲ್ಲೇ ಕಣ್ಣೀರು ಹಾಕಿದ ಡಿಸಿ ವಿಜಯ್ ಶಂಕರ್

ಅಲ್ಲದೇ ಅಡೋನಿ ಸಂಸ್ಥೆಗೆ ಸಂಬಂಧಪಟ್ಟ ಬಸವನಗುಡಿ ರೌಡಿಶೀಟರ್ ಮುನೀರ್ ಅಲಿಯಾಸ್ ಗನ್ ಮುನೀರ್, ಬ್ರಿಗೇಡ್ ಬಾಬು ಸೇರಿದಂತೆ ಐವರನ್ನ ಬಂಧಿಸಲಾಗಿದೆ.

ಐಎಂಎ ವಂಚನೆ ಪ್ರಕರಣ, ಆರಂಭದಿಂದ ಇಲ್ಲಿಯವರೆಗೆ 

Follow Us:
Download App:
  • android
  • ios