ಇಂದು ಬಕ್ರೀದ್ ಹಬ್ಬದ ಪ್ರಯುಕ್ತ ರಾಜ್ಯ ಕಾಂಗ್ರೆಸ್‌ನ ಘಟಾನುಘಟಿ ನಾಯಕರುಗಳು ಒಟ್ಟಾಗಿ ಸೇರಿ ವಿಧಾನ ಪರಿಷತ್ ಸದಸ್ಯರೊಬ್ಬರ ನಿವಾಸದಲ್ಲಿ ಭರ್ಜರಿ ಭೋಜನ ಸವಿದಿದ್ದಾರೆ. ಆ ಚಿತ್ರಗಳು ಇಲ್ಲಿವೆ.

ಬೆಂಗಳೂರು, (ಆ.12) : ಇಂದು [ಸೋಮವಾರ] ನಾಡಿನಾದ್ಯಂತ ಮುಸ್ಲಿಂ ಬಾಂಧವರು ಸಂಭ್ರಮದಿಂದ ಬಕ್ರೀದ್ ಆಚರಣೆ ಮಾಡಿದರು. ಅದೇ ರೀತಿ ಕರ್ನಾಟಕದಲ್ಲೂ ಸಹ ಹೊಸ ಉಡುಗೆ, ಹಬ್ಬದೂಟ ಮಾಡಿ ಸಡಗರದಿಂದ ಆಚರಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಕ್ರೀದ್ ಪ್ರಯುಕ್ತ ಬೆಂಗಳೂರಿನಲ್ಲಿರುವ ವಿಧಾನ ಪರಿಷತ್ ಸದಸ್ಯ ನಜೀರ್ ಅಹ್ಮದ್ ನಿವಾಸದಲ್ಲಿ ಮಧ್ಯಾಹ್ನ ಏರ್ಪಡಿಸಲಾಗಿದ್ದ ಔತಣಕೂಟದಲ್ಲಿ ಕಾಂಗ್ರೆಸ್ ನ ಘಟಾನುಘಟಿ ನಾಯರು ಒಟ್ಟಾಗಿ ಪಾಲ್ಗೊಂಡು ಹಬ್ಬದೂಟ ಸವಿದರು. 

ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವರಾದ ಜಮೀರ್ ಅಹಮದ್ ಖಾನ್, ಎಚ್. ಸಿ. ಮಹದೇವಪ್ಪ, ಕೃಷ್ಣ ಬೈರೇಗೌಡ, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್ , ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್, ಸೇರಿದಂತೆ ಹಲವು ನಾಯಕರು ಭೋಜನ ಕೂಟದಲ್ಲಿ ಪಾಲ್ಗೊಂಡಿದ್ದು, ಸ್ವೀಟ್, ವೆಜ್ , ನಾನ್ ವೆಜ್ ನಲ್ಲಿ ತರಹೇವಾರಿ ಭೋಜನ ಸವಿದರು.

ಭೋಜನ ಸವಿಯುತ್ತಿರುವ ಫೋಟೋಗಳನ್ನು ಮಾಜಿ ಸಚಿವ, ಚಾಮರಾಜಪೇಟೆ ಶಾಸಕ ಜಮೀದ್ ಅಹಮದ್ ಖಾನ್ ತಮ್ಮ ಫೇಸ್‌ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಬ್ಬದೂಟದ ಜತೆಗೆ ಇನ್ನೊಂದು ವಿಶೇಷ ಅಂದ್ರೆ ಇಂದು ಸಿದ್ದರಾಮಯ್ಯ ಅವರ ಜನ್ಮದಿನ. 

ಈ ಲಂಚ್ ಪಾರ್ಟಿಯಲ್ಲಿ ನಾಯಕರ ಮಧ್ಯೆ ಪ್ರಸ್ತುತ ರಾಜ್ಯ ರಾಜಕಾರಣದ ಬೆಳವಣಿಗೆಗಳ ಬಗ್ಗೆ ಮಾತುಕತೆಗಳು ಸಹ ನಡೆದವು.