ಉತ್ತರ ಪ್ರದೇಶದಲ್ಲಿ ಕೇಸರಿ ಬಣ್ಣದ ಅಂಬೇಡ್ಕರ್ ಪ್ರತಿಮೆ ಅನಾವರಣ ಆರೋಪ
ಅಂಬೇಡ್ಕರ್ ಹೆಸರಿನ ಜತೆ ‘ರಾಮ್ಜೀ’ ಸೇರಿಸುವಂತೆ ಉತ್ತರಪ್ರದೇಶ ಸರ್ಕಾರ ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ, ಬದೌನ್ನಲ್ಲಿ ಭಾನುವಾರ ಅನಾವರಣಗೊಳಿಸಿರುವ ಅಂಬೇಡ್ಕರ್ ಪ್ರತಿಮೆ ವಿವಾದಕ್ಕೆ ಕಾರಣವಾಗಿದೆ.
ಲಖನೌ: ಅಂಬೇಡ್ಕರ್ ಹೆಸರಿನ ಜತೆ ‘ರಾಮ್ಜೀ’ ಸೇರಿಸುವಂತೆ ಉತ್ತರಪ್ರದೇಶ ಸರ್ಕಾರ ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ, ಬದೌನ್ನಲ್ಲಿ ಭಾನುವಾರ ಅನಾವರಣಗೊಳಿಸಿರುವ ಅಂಬೇಡ್ಕರ್ ಪ್ರತಿಮೆ ವಿವಾದಕ್ಕೆ ಕಾರಣವಾಗಿದೆ.
ಇತ್ತೀಚೆಗೆ ದುಗ್ರೈಯ್ಯ ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನೂತನ ಅಂಬೇಡ್ಕರ್ ಪ್ರತಿಮೆಯನ್ನು ಅನಾವರಣ ಗೊಳಿಸಿತ್ತು.
ಸಾಮಾನ್ಯವಾಗಿ ಅಂಬೇಡ್ಕರ್ ಪ್ರತಿಮೆಗೆ ಹಾಕಿದ ಬಟ್ಟೆ ನೀಲಿ ಬಣ್ಣದಿಂದ ಕೂಡಿರುತ್ತದೆ. ಆದರೆ ಈ ಪ್ರತಿಮೆ ಕೇಸರಿ ಬಣ್ಣದಲ್ಲಿದೆ. ಅದು ಇದೀಗ ವಿವಾದಕ್ಕೆ ಕಾರಣವಾಗಿದೆ.