ಕರ್ತಾರ್'ಪುರ್ ಹೆಸರಲ್ಲಿ ಪ್ರತ್ಯೇಕತಾವಾದಿಗಳಿಗೆ ಕುಮ್ಮಕ್ಕು ನೀಡುತ್ತಿರುವ ಪಾಕ್| ಕರ್ತಾರ್'ಪುರ್ ಕಾರಿಡಾರ್ ಸಮಿತಿಯಲ್ಲಿ ಖಲಿಸ್ತಾನ್ ಪ್ರತ್ಯೇಕತಾವಾದಿಗಳು| ಪಾಕ್ ಹುನ್ನಾರವನ್ನು ತೀವ್ರವಾಗಿ ವಿರೋಧಿಸಿದ ಭಾರತ| ಕರ್ತಾರ್'ಪುರ್ ಕಾರಿಡಾರ್ ಸಭೆ ಮುಂದೂಡಿದ ಭಾರತ| ಭಾರತ ವಿರೋಧ ಅರ್ಥವಾಗುತ್ತಿಲ್ಲ ಎಂದ ಪಾಕಿಸ್ತಾನ|

ನವದೆಹಲಿ(ಮಾ.29): ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ತಾರ್'ಪುರ್ ಕಾರಿಡಾರ್ ಸಮಿತಿಯಲ್ಲಿ, ಖಲಿಸ್ತಾನ್ ಪ್ರತ್ಯೇಕತಾವಾದಿಗಳಿಗೆ ಸ್ಥಾನ ನೀಡಿರುವ ಪಾಕಿಸ್ತಾನದ ನಡೆಗೆ ಭಾರತ ತೀವ್ರ ಅಸಮಾಧಾನ ಹೊರಹಾಕಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕರ್ತಾರ್'ಪುರ್ ಕಾರಿಡಾರ್ ಗೆ ಸಂಬಂಧಪಟ್ಟ ಸಮಿತಿಯಲ್ಲಿ ಪಾಕಿಸ್ತಾನ ಸಚಿವ ಸಂಪುಟ 10 ಸದಸ್ಯರನ್ನೊಳಗೊಂಡ, ಪಾಕಿಸ್ತಾನ ಸಿಖ್ ಗುರುದ್ವಾರ ಪ್ರಬಂಧಕ್ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯಲ್ಲಿ ಖಲಿಸ್ತಾನ್ ಪ್ರತ್ಯೇಕತಾವಾದಿಗಳಿಗೂ ಸ್ಥಾನ ನೀಡಿದೆ.

ಪಾಕಿಸ್ತಾನದ ಉಪ ಹೈಕಮಿಷನರ್ ಸಯೀದ್ ಹೈದರ್ ಶಾ ಜೊತೆಗೆ ಮಾತನಾಡಿರುವ ಭಾರತ, ಸಮಿತಿಯಲ್ಲಿ ಖಲಿಸ್ತಾನ್ ಪ್ರತ್ಯೇಕತಾವಾದಿಗಳಿಗೆ ಸ್ಥಾನ ನೀಡಿದ್ದಕ್ಕೆ ಅಸಮಾಧಾನ ಹೊರಹಾಕಿದೆ.

ಇನ್ನು ಭಾರತದ ವಿರೋಧವನ್ನು ತಳ್ಳಿ ಹಾಕಿರುವ ಪಾಕಿಸ್ತಾನ, ಭಾರತ ಈ ವಿಷಯದಲ್ಲಿ ಏಕೆ ವಿರೋಧಿಸುತ್ತಿದೆ ಎಂಬುದೇ ಅರ್ಥವಾಗುತ್ತಿಲ್ಲ ಎಂದು ಪ್ರತಿಕ್ರಿಯೆ ನೀಡಿದೆ.