ವಿಶ್ವಸಂಸ್ಥೆ ಮಾನವ ಹಕ್ಕು ಸಮಿತಿ ವರದಿ ಬಹಿರಂಗ| ಕಣಿವೆಯಲ್ಲಿ ಮಾನವ ಹಕ್ಕು ಉಲ್ಲಂಘನೆ ಎಂದ ಸಮಿತಿ| ವರದಿ ಕಂಡು ಕೆರಳ ಕೆಂಡಾಮಂಡಲವಾದ ಭಾರತ| ವಿಶ್ವಸಂಸ್ಥೆಯ ವರದಿಗೆ ಭಾರತದ ತೀವ್ರ ವಿರೋಧ| ಭಯೋತ್ಪಾದನೆಯನ್ನು ಕಾನೂನುಬದ್ಧಗೊಳಿಸುವ ಪ್ರಯತ್ನ ಎಂದ ಭಾರತ| ಮಾನವ ಹಕ್ಕು ಸಮಿತಿ ವರದಿ ತಿರಸ್ಕರಿಸಿದ ವಿದೇಶಾಂಗ ಇಲಾಖೆ|

ನವದೆಹಲಿ(ಜು.08): ಜಮ್ಮು ಮತ್ತು ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿ ನೀಡಿರುವ ವರದಿಗೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ಮತ್ತು ಸೇನೆಯಿಂದ ಮಾನವ ಹಕ್ಕು ಉಲ್ಲಂಘನೆಯಾಗಿದ್ದು, ಈ ಕುರಿತು ವಿಶ್ವ ಸಮುದಾಯ ಗಮನ ಹರಿಸುವ ಅವಶ್ಯಕತೆ ಇದೆ ಎಂದು ವಿಶ್ವಸಂಸ್ಥೆ ಮಾನವ ಹಕ್ಕು ಸಮಿತಿ ವರದಿ ಮಾಡಿದೆ.

ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಭಾರತ, ಮಾನವ ಹಕ್ಕುಗಳ ನೆರಳಲ್ಲಿ ಭಯೋತ್ಪಾದನೆಯನ್ನು ಕಾನೂನುಬದ್ಧಗೊಳಿಸುವ ಅಪಾಯ ಎದುರಾಗಿದೆ ಎಂದು ಗಂಭೀರ ಆರೋಪ ಮಾಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಇಲಾಖೆ, ಭಾರತದ ಆಂತರಿಕ ವಿಷಯದಲ್ಲಿ ವಿಶ್ವಸಂಸ್ಥೆ ಅನಗತ್ಯ ಹಸ್ತಕ್ಷೇಪ ಮಾಡುತ್ತಿರುವುದು ಒಪ್ಪಲು ಸಾಧ್ಯವಿಲ್ಲ ಎಂದು ಖಾರವಾಗಿ ನುಡಿದಿದೆ.