ತಾಯ್ನಾಡಿಗೆ ಮರಳಿದ ಭಾರತಾಂಬೆಯ ವೀರ ಪುತ್ರ| ವಾಘಾ ಗಡಿ ಮೂಲಕ ಭಾರತಕ್ಕೆ ಬಂದ ವಿಂಗ್ ಕಮಾಂಡರ್ ಅಭಿನಂದನ್| ಅಭಿನಂದನ್ ಅವರನ್ನು ಸುಪರ್ದಿಗೆ ಪಡೆದ ಭಾರತೀಯ ವಾಯುಸೇನೆ| ಅಭಿನಂದನ್ ಅವರ ವೈದ್ಯಕೀಯ ತಪಾಸಣೆಗೆ ಮುಂದಾದ ವಾಯುಸೇನೆ|

ಅಮೃತ್‌ಸರ್(ಮಾ.01): ಪಾಕ್ ವಶದಲ್ಲಿದ್ದ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ಕೊನೆಗೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ.

Add Asianetnews Kannada as a Preferred SourcegooglePreferred

ರಾತ್ರಿ ಸುಮಾರು 9-20ರ ಸುಮಾರಿಗೆ ಅಭಿನಂದನ್ ಅವರನ್ನು ವಾಘಾ ಗಡಿಯ ಮೂಲಕ ಭಾರತಕ್ಕೆ ಹಸ್ತಾಂತರಿಸಲಾಯಿತು. ಇನ್ನು ಅಭಿನಂದನ್ ಬರುವಿಕೆಯನ್ನು ಕಾಯುತ್ತಿದ್ದ ಭಾರತೀಯ ವಾಯುಸೇನಾಧಿಕಾರಿಗಳು, ವಿಂಗ್ ಕಮಾಂಡರ್ ಅವರನ್ನು ತಮ್ಮ ಸುಪರ್ದಿಗೆ ಪಡೆದಿದೆ.

Scroll to load tweet…

ಈ ಕುರಿತು ಮಾಹಿತಿ ನೀಡಿರುವ ಏರ್ ವೈಸ್ ಮಾರ್ಷಲ್ ಆರ್‌ಜಿಕೆ ಕಪೂರ್, ಅಭಿನಂದನ್ ಭಾರತಕ್ಕೆ ಮರಳಿದ್ದು, ನಮ್ಮ ವೀರ ಯೋಧನ ಮರಳುವಿಕೆ ಸಂತಸ ತಂದಿದೆ ಎಂದು ಹೇಳಿದ್ದಾರೆ. ಅಲ್ಲದೇ ಅಭಿನಂದನ್ ವಿಮಾನದಿಂದ ಹಾರಿದ್ದರಿಂದ ಅವರ ವೈದ್ಯಕೀಯ ತಪಾಸಣೆ ಅವಶ್ಯಕತೆ ಇದ್ದು, ಕೂಡಲೇ ಅವರನ್ನು ಸೇನಾ ಆಸ್ಪತ್ರೆಗೆ ರವಾನಿಸಲಾಗುವುದು ಎಂದು ತಿಳಿಸಿದ್ದಾರೆ.