Asianet Suvarna News Asianet Suvarna News

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮೇಲೆ ಮತ್ತೆ ಮಸಿ!

Ink attack on Delhi CM Arvind Kejriwal in Bikaner

ನವದೆಹಲಿ(ಅ.05): ಪಾಕಿಸ್ತಾನ ಮಾಧ್ಯಮಗಳಲ್ಲಿ ಹೀರೋ ಆಗಿದ್ದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮೇಲೆ ಕೆಲವರು ಮಸಿ ಎರಚಿದ್ದಾರೆ.

ನಿನ್ನೆ ರಾತ್ರಿ ಅರವಿಂದ್‌ ಕೇಜ್ರಿವಾಲ್‌ ರಾಜಸ್ತಾನದ ಬಿಕಾನೇರ್‌ಗೆ ಭೇಟಿ ನೀಡದ ಸಂದರ್ಭದಲ್ಲಿ ಅವರ ಮೇಲೆ ಕೆಲ ವ್ಯಕ್ತಿಗಳು ಮಸಿ ಎರಚಿದ್ದಾರೆ. ಈ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಇದಕ್ಕೆ ಟ್ವೀಟ್ ಮಾಡಿರುವ ದೆಹಲಿ ಸಿಎಂ, ನನ್ನ ಮೇಲೆ ಮಸಿ ಎರಚಿದ್ದವರನ್ನು ಆ ದೇವರು ಚೆನ್ನಾಗಿಟ್ಟಿರಲಿ. ಅವರಿಗೆ ಒಳ್ಳೆದಾಗಲಿ ಎಂದು ಹೇಳಿದ್ದಾರೆ.

ಅರವಿಂದ್‌ ಕೇಜ್ರಿವಾಲ್‌, ಭಾರತೀಯ ಸೇನೆ ಪಾಕಿಸ್ತಾನದ ಸೇನಾ ನೆಲೆಗಳ ಮೇಲೆ ಸರ್ಜಿಕಲ್ ಸ್ಟ್ರೈಕ್‌ ನಡೆಸಿದ್ದಕ್ಕೆ ಪುರಾವೆ ಒದಗಿಸಬೇಕೆಂದು ಪ್ರಧಾನಿ ಅವರನ್ನು ಒತ್ತಾಯಿಸಿದ್ದರು. ಕೇಜ್ರಿವಾಲ್‌ ಅವರ ಈ ನಡೆಗೆ ದೇಶಾದ್ಯಂತ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ.

Follow Us:
Download App:
  • android
  • ios