IPS ಅಧಿಕಾರಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ
ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ರಾಜ್ಯ ಸರಕಾರ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದೆ.
ಬೆಂಗಳೂರು[ಜು. 10] ಸಿಐಡಿ, ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾಗಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನು ತಕ್ಷಣ ಜಾರಿಗೆ ಬರುವಂತೆ ಭ್ರಷ್ಟಾಚಾರ ನಿಗ್ರಹ ದಳ[ಎಸಿಬಿ] ಐಜಿಪಿಯಾಗಿ ವರ್ಗ ಮಾಡಲಾಗಿದೆ.
ಭ್ರಷ್ಟಾಚಾರ ನಿಗ್ರಹ ದಳ[ಎಸಿಬಿ] ಐಜಿಪಿಯಾಗಿದ್ದ ಎಂ.ಚಂದ್ರಶೇಖರ್ ಅವರನ್ನು ಸಿಐಡಿ, ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ.
ವಿಧಾನಸೌಧದಲ್ಲಿ ಹೊಡಿ-ಬಡಿ, ರಾಜೀನಾಮೆ ಕೊಟ್ಟ ಸುಧಾಕರ್ಗೆ ದಿಗ್ಬಂಧನ
ದೋಸ್ತಿ ಸರಕಾರ ಅಳಿವು ಉಳಿವಿನ ಸಂದರ್ಭದಲ್ಲಿ ಇದ್ದರೂ ನಿರಂತರವಾಗಿ ವರ್ಗಾವಣೆ ಪರ್ವ ಮಾತ್ರ ಹಾಗೆ ಮುಂದುವರಿದೆ.