Asianet Suvarna News Asianet Suvarna News

ಇಸ್ಕಾನ್ ದೇವಾಲಯದ ಪೂಜಾರಿ ಬರ್ಬರ ಹತ್ಯೆ

ಇಸ್ಕಾನ್ ಪೂಜಾರಿ ಸಂಜಯ್ ಸತೀಶ್​​ನನ್ನು ಕೈ ಕಾಲು ಕಟ್ಟಿಹಾಕಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೆ.ಆರ್ ಪುರಂನ ಬೆತ್ತಲ್ ನಗರದಲ್ಲಿ ನಡೆದಿದೆ.

Iskcon Temple Priest Murder

ಬೆಂಗಳೂರು : ಇಸ್ಕಾನ್ ಪೂಜಾರಿ ಸಂಜಯ್ ಸತೀಶ್​​ನನ್ನು ಕೈ ಕಾಲು ಕಟ್ಟಿಹಾಕಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೆ.ಆರ್ ಪುರಂನ ಬೆತ್ತಲ್ ನಗರದಲ್ಲಿ ನಡೆದಿದೆ.

ಇಸ್ಕಾನ್ ದೇವಾಲಯದಲ್ಲಿ ಅರ್ಚಕರಾಗಿದ್ದ ಸಂಜಯ್ ಸತೀಶ್ ಬೆತ್ತಲ್ ನಗರದ ಅಪಾರ್ಟ್​​ಮೆಂಟ್​ನಲ್ಲಿ ವಾಸವಾಗಿದ್ದರು. 15 ದಿನಗಳಿಗೊಮ್ಮೆ ಅಪಾರ್ಟ್​​​ಮೆಂಟ್​​​ಗೆ ಬಂದು ಒಂದೆರಡು ದಿನ ಉಳಿಯುತ್ತಿದ್ದ ಸಂಜಯ್ ಕಳೆದ ಬುಧವಾರದಂದು ಇಸ್ಕಾನ್​​ನಲ್ಲಿ ಪೂಜೆ ಮುಗಿಸಿಕೊಂಡು ಅಪಾರ್ಟ್​​​ಮೆಂಟ್​​ಗೆ ಬಂದಿದ್ದಾರೆ.

 ಈ ವೇಳೆಯಲ್ಲಿ ಅಪಾರ್ಟ್​​ಮೆಂಟ್​​ಗೆ ಬಂದಿರೋ ಕೆಲವು ದುಷ್ಕರ್ಮಿಗಳು ಆತನ ಕೈ ಕಾಲು ಕಟ್ಟಿ ಕೊಲೆ ಮಾಡಿದ್ದಾರೆ. ಆದರೆ ಕೊಲೆಯಾಗಿ ಒಂದು ವಾರ ಆದ್ರೂ ಅಕ್ಕಪಕ್ಕದ ಮನೆಯವರಿಗೆ ಈ ವಿಷ್ಯ ಗೊತ್ತಿರಲಿಲ್ಲ. ಕಳೆದ ರಾತ್ರಿ ಸಂಜಯ್ ಫ್ಲಾಟ್​​ನಿಂದ ದುರ್ವಾಸನೆ ಬರುತ್ತಿದ್ದ ಹಿನ್ನಲೆ ಅಕ್ಕಪಕ್ಕದ ಮನೆಯವರು ಕೆ.ಆರ್ ಪುರಂ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ.

ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಬೆರಳಚ್ಚು ತಜ್ಞರನ್ನು ಕರೆಹಿಸಿ ಪರಿಶೀಲನೆ ನಡೆಸಿದ್ದು ತನಿಖೆಯನ್ನು ಕೈಗೊಂಡಿದ್ದಾರೆ. ಆದರೆ ಅಕ್ಕಪಕ್ಕದವರು ಸಂಜಯ್ ಸತೀಶ್ ಸುಮಾರು ವರ್ಷಗಳಿಂದ ಒಬ್ಬರೇ ಫ್ಲಾಟ್​​ನಲ್ಲಿ ವಾಸವಾಗಿದ್ದು ಅವರ ಹಿನ್ನಲೆ ಗೊತ್ತಿಲ್ಲ ಅಂದಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೋರಿಂಗ್ ಆಸ್ಪತ್ರೆಗೆ ಕಳುಹಿಸಿದ್ದು ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

Follow Us:
Download App:
  • android
  • ios