ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಕಾಂಗ್ರೆಸ್’ನ ಕೆಲ ನಾಯಕರ ಮೇಲೆ ಐಟಿ ದಾಳಿ ನಡೆದಿರುವುದರ ಬಗ್ಗೆ ನಮಗೆ ಯಾವುದೇ ವರದಿ ಬಂದಿಲ್ಲ. ಅವರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ದಾಳಿ ನಡೆಸಿದ್ದಾರೆ. ವರದಿ ಬಂದ ನಂತರ ಈ ಬಗ್ಗೆ ಸೂಕ್ತ ಕ್ರಮ ತಗೆದುಕೊಳ್ಳಲಾಗುವುದು ಎಂದರು.

ಚಿಕ್ಕಮಗಳೂರು (ಜ. 26): ಐಟಿ ಇಲಾಖೆ ಇತ್ತೀಚೆಗೆ ಕಾಂಗ್ರೆಸ್’ನ ಬಹುತೇಕ ನಾಯಕರ ಮೇಲೆ ದಾಳಿ ನಡೆಸುತ್ತಿರುವುದನ್ನು ಗಮನಿಸಿದರೆ ಅದು ಕೇಂದ್ರದ ಮೂಗಿನ ನೇರಕ್ಕೆ ನಡೆದುಕೊಳ್ಳುತ್ತಿದೆ ಎಂಬ ಅನುಮಾನ ಬರುವುದು ಸಹಜ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಕಾಂಗ್ರೆಸ್’ನ ಕೆಲ ನಾಯಕರ ಮೇಲೆ ಐಟಿ ದಾಳಿ ನಡೆದಿರುವುದರ ಬಗ್ಗೆ ನಮಗೆ ಯಾವುದೇ ವರದಿ ಬಂದಿಲ್ಲ. ಅವರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ದಾಳಿ ನಡೆಸಿದ್ದಾರೆ. ವರದಿ ಬಂದ ನಂತರ ಈ ಬಗ್ಗೆ ಸೂಕ್ತ ಕ್ರಮ ತಗೆದುಕೊಳ್ಳಲಾಗುವುದು ಎಂದರು.

ಇದೇ ವೇಳೆ ಬಿಜೆಪಿಯಿಂದ ಕೆಲ ನಾಯಕರು ಕಾಂಗ್ರೆಸ್ ಬರುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಇತ್ತೀಚೆಗೆ ಬಿಜೆಪಿಯಲ್ಲಾಗುತ್ತಿರುವ ಸಾಕಷ್ಟು ವಿದ್ಯಮಾನಗಳನ್ನು ಗಮನಿಸಿದರೆ ಮುಂದಿನ ದಿನಗಳಲ್ಲಿ ಸಾಕಷ್ಟು ನಾಯಕರು ಕಾಂಗ್ರೆಸ್’ಗೆ ಬರುವ ಲಕ್ಷಣಗಳಿವೆ ಎಂದಿದ್ದಾರೆ.