ಈಗಾಗಲೇ ಆರೋಪಿ ಶೋಧಕ್ಕಾಗಿ ವಿಶೇಷ 3 ಪೊಲೀಸ್  ತಂಡಗಳನ್ನು ರಚಿಸಲಾಗಿದೆ. ಕಳೆದ 6 ದಿನಗಳಿಂದ ಬೆಂಗಳೂರು ಸೇರಿದಂತೆ ಕೇರಳದಲ್ಲಿ ಆರೋಪಿಯನ್ನು ಆರ್.ಟಿ. ನಗರ ಪೊಲೀಸರು ಹುಡುಕುತ್ತಿದ್ದಾರೆ.

ಬೆಂಗಳೂರು(ಆ.20): ಜಗ್ಗೇಶ್ ಅವರ ಪುತ್ರ ನಟ ಗುರುರಾಜ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಶಿವಶಂಕರ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ. ಆರೋಪಿ ನಿನ್ನೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ.

ಈಗಾಗಲೇ ಆರೋಪಿ ಶೋಧಕ್ಕಾಗಿ ವಿಶೇಷ 3 ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಕಳೆದ 6 ದಿನಗಳಿಂದ ಬೆಂಗಳೂರು ಸೇರಿದಂತೆ ಕೇರಳದಲ್ಲಿ ಆರೋಪಿಯನ್ನು ಆರ್.ಟಿ. ನಗರ ಪೊಲೀಸರು ಹುಡುಕುತ್ತಿದ್ದಾರೆ. ಘಟನೆ ನಂತರ ಆರೋಪಿ ಮೋಬೈಲ್'ಅನ್ನು ಮನೆಯಲ್ಲಿ ಬಿಟ್ಟುಹೋಗಿದ್ದಾನೆ.

ಗುರುರಾಜ್ ಅವರು ಮಗನನ್ನು ಶಾಲೆಗೆ ಬಿಡಲು ಹೋದಂತಹ ಸಂದರ್ಭದಲ್ಲಿ ಆರ್​.ಟಿ.ನಗರದಲ್ಲಿ ವೇಗದ ಚಾಲನೆ ವಿಚಾರವಾಗಿ ಮಾತಿಗೆ ಮಾತು ಬೆಳೆದು ಆರೋಪಿ ಚಾಕುವಿನಿಂದ ಇರಿದಿದ್ದ.