ನಿರಂತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜೈನ ಮುನಿ ತರುಣ ಸಾಗರ್ ನಿಧನರಾಗಿದ್ದಾರೆ. 51 ವರ್ಷದ ತರುಣ ಸಾಗರ್ ಶನಿವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕೊನೆ ಉಸಿರೆಳೆದರು.
ನವದೆಹಲಿ[ಸೆ.01] ನವದೆಹಲಿಯ ಕೃಷ್ಣ ನಗರದ ರಾಧಾಪುರಿ ಜೈನ ಆಶ್ರಮದಲ್ಲಿ ಜೈನ ಮುನಿ ತರುಣ ಸಾಗರ್ ಕೊನೆ ಉಸಿರೆಳೆದರು. ಮುನಿಯ ಅಂತಿಮ ವಿಧಿ ವಿಧಾನಗಳು ಉತ್ತರ ಪ್ರದೇಶದ ತರುಣಸಾಗರಂ ನಲ್ಲಿ ನಡೆಯಲಿದೆ.
Add Asianetnews Kannada as a Preferred Source

ಜೈನ ಸಮುದಾಯದಲ್ಲಿ ಅಪಾರ ಅನುಯಾಯಿಗಳನ್ನು ಹೊಂದಿರುವ ಮುನಿ ತರುಣ ಸಾಗರ್ ಜಾಂಡೀಸ್ ನಿಂದ ಬಳಲುತ್ತಿದ್ದರು. ಅನಾರೋಗ್ಯದ ಕಾರಣದಿಂದ ಖಾಸಗಿ ಆಸ್ಪತ್ರೆಯಲ್ಲಿ 20 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದರು.
1967 ರ ಜೂನ್ 26ರಂದು ಮಧ್ಯ ಪ್ರದೇಶದ ದಾಹೋಹ್ ಜಿಲ್ಲೆಯಲ್ಲಿ ಜನಿಸಿದ ಪವನ್ ಕುಮಾರ್ ಜೈನ್ 1981 ರಲ್ಲಿ ಸನ್ಯಾಸತ್ವ ಸ್ವೀಕರಿಸಿದ್ದರು. ತಮ್ಮ ಭಾಷಣಗಳ ಮೂಲಕವೇ ಅಪಾರ ಅಭಿಮಾನಿಗಳನ್ನು ಸಾಗರ್ ಗಳಿಸಿದ್ದರು.
