ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಹಣಕಾಸು ಸಚಿವ ಜೇಟ್ಲಿ| ಐಸಿಯುನಲ್ಲೇ ಜೇಟ್ಲಿಗೆ ಚಿಕಿತ್ಸೆ: ಆರೋಗ್ಯ ಸ್ಥಿತಿ ಇನ್ನೂ ಗಂಭೀರ
ನವದೆಹಲಿ[ಆ.14]: ಉಸಿರಾಟದ ತೊಂದರೆಯಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿಯವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದ್ದು, ಅವರ ಆರೋಗ್ಯ ಗಂಭೀರವಾಗಿಯೇ ಮುಂದುವರೆದಿದೆ.
ಆದರೆ ಹೃದಯ ಬಡಿತ ಹಾಗೂ ರಕ್ತ ಸಂಚಾರ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. 68 ವರ್ಷದ ಜೇಟ್ಲಿಯವರನ್ನು ಉಸಿರಾಟದ ತೊಂದರೆಯಿಂದಾಗಿ ಆ.9 ರ ಬೆಳಿಗ್ಗೆ 10 ಗಂಟೆಗೆ ಏಮ್ಸ್ಗೆ ದಾಖಲು ಮಾಡಲಾಗಿತ್ತು.
ಬಹು ವೈದ್ಯರ ತಂಡ ಜೇಟ್ಲಿ ಆರೋಗ್ಯದ ಮೇಲೆ ನಿಗಾ ವಹಿಸಿದ್ದು, ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಏಮ್ಸ್ ಮೂಲಗಳು ತಿಳಿಸಿವೆ.
