ಜಮ್ಮು ಕಾಶ್ಮೀರದಲ್ಲಿ  ಮೈತ್ರಿ ಮಾಡಿಕೊಂಡು ಆಡಳಿತ ನಡೆಸುತ್ತಿದ್ದ ಪಿಡಿಪಿ ಹಾಗೂ ಬಿಜೆಪಿ ಮೈತ್ರಿ ಮುರಿದು ಬಿದ್ದಿದೆ. ಇದೀಗ ಒಂದು ಬಾರಿಯೂ ಹಿಂದೂ ಮುಖ್ಯಮಂತ್ರಿಯನ್ನು ಕಾಣದ ರಾಜ್ಯಕ್ಕೆ ಈಗ ಹಿಂದೂ ವ್ಯಕ್ತಿಯೋರ್ವ ಮುಖ್ಯಮಂತ್ರಿಯಾಗಬೇಕು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. 

ಬೆಂಗಳೂರು : ಜಮ್ಮು ಕಾಶ್ಮೀರಕ್ಕೆ ಹಿಂದೂ ಮುಖ್ಯಮಂತ್ರಿ ನೇಮಕವಾಗಲು ಇದು ಸೂಕ್ತವಾದ ಸಮಯ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೇ ವೇಳೆ ನೆಹರು ಅವರನ್ನು ಟೀಕಿಸಿದ ಸುಬ್ರಮಣ್ಯಂ ಸ್ವಾಮಿ ಕಾಶ್ಮೀರಕ್ಕೆ ಮುಸಲ್ಮಾನ ಮುಖ್ಯಮಂತ್ರಿ ನೇಮಕ ಮಾಡುವುದು ಜವಾಹರ್ ಲಾಲ್ ನೆಹರು ಸಂಸ್ಕೃತಿಯಾಗಿದ್ದು, ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಈಗ ಅಲ್ಲಿಗೆ ಹಿಂದೂ ಮುಖ್ಯಮಂತ್ರಿಯೋರ್ವರ ನೇಮಕವಾಗಬೇಕು ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. 

ಕಾಶ್ಮೀರದಲ್ಲಿ ಹಿಂದೂ ಮುಖ್ಯಮಂತ್ರಿಯೇ ಆಗಬೇಕಾಗಿದ್ದು, ಪಿಡಿಪಿಯಲ್ಲಿ ಹಿಂದೂ ಅಥವಾ ಸಿಖ್ ವ್ಯಕ್ತಿಯಿದ್ದರೆ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿ ಎಂದು ಹೇಳಿದ್ದಾರೆ. ಇನ್ನು ನೆಹರು ಅವರು ಸಂಪ್ರದಾಯವೊಂದನ್ನು ನಡೆಸಿಕೊಂಡು ಬಂದಿದ್ದು, ಜಮ್ಮು ಕಾಶ್ಮೀರದಲ್ಲಿ ಕೇವಲ ಮುಸ್ಲಿಂ ವ್ಯಕ್ತಿಯೇ ಮುಖ್ಯಮಂತ್ರಿಯಾಗುತ್ತಿದ್ದಾರೆ. 

1965ರಿಂದ ಜಮ್ಮು ಕಾಶ್ಮೀರವು ಒಟ್ಟು 9 ಮಂದಿ ಮುಖ್ಯಮಂತ್ರಿಗಳನ್ನು ಕಂಡಿದೆ. ಈ ವೇಳೆಯಲ್ಲಿ ಮುಸ್ಲಿಮರಿಗೆ ಪ್ರಾತಿನಿಧ್ಯ ನೀಡಲಾಗಿದೆ. ಆದ್ದರಿಂದ ಈಗ ಇಲ್ಲಿಗೆ ಹಿಂದೂ ಮುಖ್ಯಸ್ಥ ನೇಮಕ ಅಗತ್ಯವಿದೆ ಎಂದಿದ್ದಾರೆ.