ಅಧಿಕಾರಿಗಳು ಕೋಡ್​ ವರ್ಡ್​ನಲ್ಲಿ ಹೆಸರಿಸಿದ ಬಿಗ್ ಬಾಸ್ ಯಾರು, ಮೂವರು ಸಚಿವರಲ್ಲಿ ಒಬ್ಬರ ಹೆಸರನ್ನು ...

ಮಂಗಳೂರು(ಡಿ.3): ರಾಜ್ಯ ಸರ್ಕಾರದ ಅಧಿಕಾರಿಗಳಿಬ್ಬರ ಮನೆಯಲ್ಲಿ ಅಪಾರ ಪ್ರಮಾಣದ ಕಾಳಧನ ಸಿಕ್ಕಿರುವುದು ರಾಜ್ಯದ ಇತಿಹಾಸದಲ್ಲೇ ಕರಾಳ ದಿನ ಎಂದು ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ವಿಷಾದ ವ್ಯಕ್ತಪಡಿಸಿದ್ದಾರೆ.

Add Asianetnews Kannada as a Preferred SourcegooglePreferred

ಮಂಗಳೂರಿನಲ್ಲಿ ಮಾತನಾಡಿದ ಅವರು, 152 ಕೋಟಿ ರೂ.ಗಳಲ್ಲಿ ಕಾಳಧನದ ಪ್ರಮಾಣ ಎಷ್ಟು ಎಂಬ ಬಗ್ಗೆ ವಿವರ ನೀಡುವಂತೆ ಆಗ್ರಹಿಸಿದ್ದಾರೆ. ಅಧಿಕಾರಿಗಳು ಕೋಡ್​ ವರ್ಡ್​ನಲ್ಲಿ ಹೆಸರಿಸಿದ ಬಿಗ್ ಬಾಸ್ ಯಾರು, ಮೂವರು ಸಚಿವರಲ್ಲಿ ಒಬ್ಬರ ಹೆಸರನ್ನು ಮಹದೇವಪ್ಪ ಎಂದು ಮಾಧ್ಯಮ ಹೆಸರಿಸಿದ್ದು, ಉಳಿದಿಬ್ಬರು ಯಾರು ಎಂದು ಪೂಜಾರಿ ಪ್ರಶ್ನಿಸಿದ್ದಾರೆ. ಇದರ ಪ್ರಮುಖ ರೂವಾರಿ ಸಿಎಂ ಎಂದು ರಾಜ್ಯದ ಜನ ಸಂಶಯ ಪಡುತ್ತಿದ್ದಾರೆ. ಸಂಜೆಯ ಒಳಗೆ ಈ ವಿಚಾರವನ್ನು ಸ್ಪಷ್ಟಪಡಿಸಿ ಇಲ್ಲವೇ ಹೈಕಮಾಂಡ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಹೈಕಮಾಂಡ್ ಈ ವಿಚಾರದಲ್ಲಿ ಹಿಂದೇಟು ಹಾಕಿದರೆ ಅಕ್ರಮದಲ್ಲಿ ಅದಕ್ಕೂ ಪಾಲಿದೆ ಎಂಬ ಅರ್ಥ ಕಲ್ಪಿಸಲಾಗುತ್ತದೆ ಎಂದು ಅವರು ಈ ಸಂದರ್ಭದಲ್ಲಿ ಆತಂಕ ವ್ಯಕ್ತಪಡಿಸಿದರು.