ಆಗಾಗ ಕಾಲು ಕೆದರಿಕೊಂಡು ಒಳನುಗ್ಗುವ ಪಾಕಿಸ್ತಾನ ಮತ್ತೆ ತನ್ನ ಹಳೆಯ ಕಿತಾಪತಿಯನ್ನೇ ಮಾಡಿದೆ.  ಪಾಕ್ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.

ಶ್ರೀನಗರ[ಜು. 30]  ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ ಮಂಗಳವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ಭಾರತದ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜೌರಿ ಜಿಲ್ಲೆಯ ಸುಂದರ್​ಬಾನಿ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ದಾಳಿಯಲ್ಲಿ ಭಾರತೀಯ ಯೋಧ 34 ವರ್ಷದ ನಾಯಕ್ ಕೃಷನ್ ಲಾಲ್ ಅವರು ಹುತಾತ್ಮರಾಗಿದ್ದಾರೆ.

ತಂಗಧರ್-ಕೇರಾನ್ ಭಾಗದಲ್ಲಿ ಪ್ರತಿ ಏಟು ನೀಡಿರುವ ಭಾರತೀಯ ಸೇನೆ ಇಬ್ಬರು ಪಾಕಿಸ್ತಾನಿ ಸೈನಿಕರನ್ನು ಹತ್ಯೆ ಮಾಡಿದೆ. ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಇಂಥ ಅಪ್ರಚೋದಿತ ದಾಳಿಗಳು ನಿರಂತರವಾಗಿ ನಡೆಯುತ್ತಲೆ ಇವೆ. ನಮ್ಮ ಸೈನ್ಯ ಅದೆಲ್ಲದಕ್ಕೂ ತಕ್ಕ ಉತ್ತರ ನೀಡಿಕೊಂಡೆ ಬಂದಿದೆ.

Scroll to load tweet…